ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕನ್ನಮಂಗಲದ ಸಸ್ಯ ಶಾಸ್ತ್ರೀಯ ತೋಟವನ್ನು ಉದ್ಘಾಟಿಸಿದರು.
ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ತೋಟಗಾರಿಕಾ ಸಚಿವ ಶಂಕರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ತೋಟಗಾರಿಕಾ ಇಲಾಖೆ ನಿರ್ದೇಶಕಿ ಫೌಜಿಯಾ ತರನ್ನುಮ್ ಉಪಸ್ಥಿತರಿದ್ದರು.



























































