ತುಮಕೂರು: ಪ್ರಾಣದ ಹಂಗು ತೊರೆದು, ನಾಗರಿಕ ನೊಬ್ಬನ ರಕ್ಷಣೆಗೆ ಧಾವಿಸಿ, ತೀವ್ರವಾಗಿ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ, ತಲಾ ಎರಡು ಲಕ್ಷ ರೂಪಾಯಿಗಳ ಸಹಾಯಧನ ವನ್ನು ಇಲಾಖೆ ಬಿಡುಗಡೆಗೊಳಿಸಿ ಆದೇಶ ಮಾಡಲಾಗಿದೆ.
ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಈ ವಕುರಿತು ಮಾಹಿತಿ ನೀಡಿದರು. ತುಮಕೂರು ಜಿಲ್ಲೆಯ ಲಿಂಗನಹಳ್ಳಿ ಗ್ರಾಮ ದಲ್ಲಿ ವ್ಯಕ್ತಿಯೊಬ್ಬ ಪೆಟ್ರೊಲ್ ಸುರಿದುಕೊಂಡು ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು, ರಕ್ಷಿಸಲು ಹೋದ ಇಬ್ಬರು ಪೊಲೀಸ್ ಕಾನಸ್ಟೇಬಲ್ ಗಳು, ಸುಟ್ಟ ಗಾಯಗಳಿಂದ ಅಸ್ಪತ್ರೆಗೆ ಸೇರಿಸಲಾಗಿತ್ತು. ಜಿಲ್ಲಾ ಪೊಲೀಸ್ ಮುಖ್ಯಸ್ಥ ರಾಹುಲ್ ಅವರು, ಗಾಯಾಳು ಪೊಲೀಸರನ್ನು ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ತೀವ್ರ ಸುಟ್ಟ ಗಾಯಗಳಿಂದ ಅಸ್ಪತ್ರೆಗೆ ದಾಖಲಾದ ಕಾನ್ಸ್ಟೇಬಲ್ ಗಳು, ಪ್ರಸ್ತುತ ಚೇತರಿಸಿ ಕೊಳ್ಳುತ್ತಿದ್ದಾರೆ. ಈ ಪೊಲೀಸ್ ಸಿಬ್ಬಂದಿಗೆ ಸರ್ಜಾರ ಸಹಾಯಹಸ್ತ ಚಾಚಿದೆ ಎಂದು ಅರಗ ಜ್ಞಾನೇಂದ್ರ ತಿಳಿಸಿದರು.





















































