ತಳಮಟ್ಟದಲ್ಲೇ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ತರಬೇತಿ ನೀಡಲು ಅನುಕೂಲ: ಸಚಿವ ಡಾ.ನಾರಾಯಣಗೌಡ
ಗ್ರಾಮೀಣ ಭಾಗದಲ್ಲಿರುವ ಪ್ರತಿಭೆಗಳನ್ನು ಗುರುತಿಸದೇ ಹಲವರು ಅವಕಾಶ ವಂಚಿತರಾಗುತ್ತಿದ್ದಾರೆ. ಹಾಗಾಗಿ, ಪ್ರಾಥಮಿಕ ಹಂತದಲ್ಲಿ ಪ್ರತಿಭೆಗಳನ್ನು ಗುರುತಿಸಲು ದೈಹಿಕ ಶಿಕ್ಷಕರ ಪಾತ್ರ ಬಹಳ ಮಹತ್ವವಾಗಿರುತ್ತದೆ. ಈ ನಿಟ್ಟಿನಲ್ಲಿ ದೈಹಿಕ ಶಿಕ್ಷಕರಿಗೆ ಕ್ರೀಡಾ ಪ್ರತಿಭಾನ್ವೇಷಣೆ ಕುರಿತು ಆನ್ಲೈನ್ ತರಬೇತಿ ನೀಡಲಾಗುತ್ತದೆ. ಇದರಿಂದ ಪ್ರತಿಭಾನ್ವಿತರನ್ನು ಗುರುತಿಸಿ, ಅವರಿಗೆ ಅಗತ್ಯ ತರಬೇತಿ ನೀಡಲು ಸಹಾಯವಾಗಲಿದೆ. ಇದರಿಂದ 2028 ರ ಲಾಸ್ ಏಂಜಲೀಸ್ ಒಲಂಪಿಕ್ನಲ್ಲಿ ಕರ್ನಾಟಕದಿಂದ ಹೆಚ್ಚಿನ ಕ್ರೀಡಾಪಟುಗಳು ರಾಷ್ಟ್ರವನ್ನು ಪ್ರತಿನಿಧಿಸಿ ಹೆಚ್ಚಿನ ಪದಕಗಳನ್ನು ಗೆಲ್ಲಲು ಯೋಜಿಸಲಾಗಿರುವ ಮಿಷನ್ ಒಲಂಪಿಕ್ಗೆ ಅನುಕೂಲವಾಗಲಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.