ಕೊಪ್ಪಳ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಿಜೆಪಿ ವತಿಯಿಂದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಜನ ಸ್ವರಾಜ್ ಯಾತ್ರೆಗೆ ಚಾಲನೆ ನೀಡಿದರು.
ಕೊಪ್ಪಳದಲ್ಲಿ ಕಹಳೆ ಊದುವ ಮೂಲಕ ಈ ಜನ ಸ್ವರಾಜ್ ಯಾತ್ರೆಗೆ ಸಿಎಂ ಚಾಲನೆ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವ ಭಗವಂತ, ಸಚಿವರಾದ ಮುರುಗೇಶ್ ನಿರಾಣಿ, ಹಾಲಪ್ಪ ಆಚಾರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ನಾಯಕರು, ಜನಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.