ಬೆಂಗಳೂರು: ರಾಜ್ಯ ಯುವಶಕ್ತಿಯ ಕೌಶಲ್ಯ ಅಭಿವೃದ್ಧಿಯಿಂದ ‘ಕೌಶಲ್ಯ ಕರ್ನಾಟಕದ’ ನಿರ್ಮಾಣವು ಸಾಧ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಬೆಂಗಳೂರಿನಲ್ಲಿ ಇಂದು ಆಯೋಜಿತವಾದ
‘ವಿಶ್ವ ಯುವ ಕೌಶಲ್ಯ’ ದಿನಾಚರಣೆಯನ್ನು ಯಡಿಯೂರಪ್ಪ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶವೊಂದರ ಅಭಿವೃದ್ಧಿಯು ಯುವ ಜನರ ಕೌಶಲ್ಯದ ಮಟ್ಟವನ್ನು ಆಧರಿಸಿದೆ ಎಂದರುು.
ಕರ್ನಾಟಕ ಸರ್ಕಾರವು ಯುವಕರ ಕೌಶಲ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಳೆದ 2 ವರ್ಷಗಳಲ್ಲಿ ಹಲವು ಪ್ರಮುಖ ಯೋಜನೆಗಳನ್ನು ಹಮ್ಮಿಕೊಂಡಿದೆ.
ರಾಜ್ಯದ 150 ಸರಕಾರಿ ಐ.ಟಿ ಐ ಗಳನ್ನು ಉನ್ನತೀಕರಿಸಿ Industrial Automation, Robotics, Industry 4.0 ನಂತಹ ಅತ್ಯಾಧುನಿಕ ಲ್ಯಾಬ್ಗಳನ್ನು ಸ್ಥಾಪಿಸಲು 4,636.50 ಕೋಟಿ ರೂಪಾಯಿಗಳ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದರು.
ಉನ್ನತೀಕರಣದ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಿ ಇದೇ ಸೆಪ್ಟೆಂಬರ್ ನಲ್ಲಿ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಕೋವಿಡ್-19 ಸಾಂಕ್ರಾಮಿಕದ ಹಿನ್ನಲೆ ಇತರೆ ರಾಜ್ಯಗಳಿಂದ ಮರಳಿದ ವಲಸೆ ಕಾರ್ಮಿಕರ ತರಬೇತಿ ಮತ್ತು ಕೆಲಸ ದೊರಕಿಸಲು ಸರ್ಕಾರವು ಕೌಶಲ್ಕರ್-ಡಾಟ್-ಕಾo ವೆಬ್ ಪೋರ್ಟಲ್ನ್ನು ಅಭಿವೃದ್ಧಿಪಡಿಸಿದೆ. ಕೈಗಾರಿಕೆಗಳಲ್ಲಿರುವ ಉದ್ಯೋಗ ಅವಕಾಶಗಳಿಗೆ ಅನುಸಾರವಾಗಿ ಕುಶಲ ಯುವಕರಿಗೆ ಉದ್ಯೋಗ ಒದಗಿಸಲು Skill Connect ವೆಬಿ ಪೋರ್ಟಲ್ ಮೂಲಕ ವರ್ಚುಯಲ್ ಉದ್ಯೋಗ ಮೇಳಗಳನ್ನು ನಡೆಸಲಾಗುತ್ತಿದೆ ಎಂದವರು ತಿಳಿಸಿದರು.