ಬೆಂಗಳೂರು ಸ್ಮಾಟ್೯ ಸಿಟಿ ಯೋಜನೆಯಡಿ ಕೈಗೊಂಡಿರುವ ಕಬ್ಬನ್ ಪಾಕ್೯ ಅಭಿವೃದ್ಧಿ ಕಾಮಗಾರಿಯನ್ನು ಸ್ಮಾಟ್೯ ಸಿಟಿ ಯೋಜನೆ ಮುಖ್ಯಸ್ಥ ರಾಕೇಶ್ ಸಿಂಗ್ ಅವರು ಪರಿವೀಕ್ಷಣೆ ನಡೆಸಿದರು.
ಬಾಲಭವನದಲ್ಲಿ ಅಂಗವಿಕಲ ಮಕ್ಕಳಿಗಾಗಿ ಥೆರೋಪೆಟಿಕ್ ಪಾಕ್೯ ಕಾಮಗಾರಿ, ಬೋಟಿಂಗ್ ಪಾಂಡ್, ಲ್ಯಾಂಡ್ ಸ್ಕೇಪಿಂಗ್ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಸ್ಮಾಟ್೯ ಸಿಟಿ ಲಿಮಿಟೆಡ್ ನಿರ್ವಹಿಸುತ್ತಿದ್ದು, ಶಾಲಾ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಯೋಜಿಸಿ ವೈಜ್ಞಾನಿಕ ಅಂಶಗಳನ್ನು ಅಳವಡಿಸಿಕೊಂಡು ಕಾಮಗಾರಿ ಮಾಡುವಂತೆ ಸೂಚಿಸಿದ ಅವರು ಬಾಲಭವನ ಆವರಣದಲ್ಲಿ ನಡೆಸುತ್ತಿರುವ ಒಟ್ಟಾರೆ ಅಭಿವೃದ್ಧಿ ಕೆಲಸಗಳನ್ನು ಮಾಚ್೯ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ರಾಕೇಶ್ ಸಿಂಗ್ ಅವರು ಗುತ್ತಿಗೆದಾರರಿಗೆ ಸೂಚಿಸಿದರು.
ಬಾಲಭವನದ ಅಧ್ಯಕ್ಷೆ ಚಿಕ್ಕಮ್ಮ , ಸ್ಮಾಟ್೯ ಸಿಟಿಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಮುಖ್ಯ ಇಂಜಿನಿಯರ್ ವಿನಾಯಕ ಸುಗುರ್, ತೋಟಗಾರಿಕೆ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.