ದುಬೈ: ಹಾರ್ಮುಜ್ ಜಲಸಂಧಿಯ ಸಮೀಪ 18 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಮರದ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ದೋಣಿ ಮಗುಚಿಬಿದ್ದ ಪರಿಣಾಮ ಒಬ್ಬ ಭಾರತೀಯ ನಾವಿಕ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, ಸಾಮಾನ್ಯ ಸರಕುಗಳನ್ನು ಸಾಗಿಸುತ್ತಿದ್ದ ದೋಣಿಯಲ್ಲಿ ಶುಕ್ರವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ನಿಖರ ಕಾರಣವನ್ನು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಘಟನೆಯ ವೇಳೆ ಹಾದುಹೋಗುತ್ತಿದ್ದ ಮತ್ತೊಂದು ಹಡಗು ಸಿಬ್ಬಂದಿಯನ್ನು ರಕ್ಷಿಸಿದೆ. ಗಾಯಗೊಂಡ ನಾಲ್ವರು ಭಾರತೀಯರಿಗೆ ದುಬೈನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಸುರಕ್ಷಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.





































































