ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಗುರು ಸ್ವಾಮಿ ಖ್ಯಾತಿಯ ಶಿವರಾಂ ವಿಧಿವಶರಾಗಿದ್ದಾರೆ. ಕೆಲವು ದಿನಗಳ ಹಿಂದೆ ಆಜಸ್ಮಿಕ ಘಟನೆಯೊಂದರಲ್ಲಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಲಾರಿಯಾಗದೆ ಶನಿವಾರ ಇಹಲೋಕ ತ್ಯಜಿಸಿದ್ದಾರೆ.
ಕೆಲವು ದಿನಗಳ ಹಿಂದೆ ನಟ ಶಿವರಾಂ ಅವರು ಬೆಂಗಳೂರಿನ ವಿದ್ಯಾಪೀಠ ಬಳಿ ಪ್ರಶಾಂತ್ ಆಸ್ಪತ್ರೆಗೆ ದಾಖಲಾಗಿದ್ದರು. ಮೆದುಳಿಗೆ ಗಂಭೀರ ಏಟು ತಗುಲಿದ್ದರಿಂದ ಅವರು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದಯವೂ ಸ್ಪಂದಿಸುತ್ತಿರಲಿಲ್ಲ. ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಶಿವರಾಂ ಅವರ ಪುತ್ರ ಲಕ್ಷ್ಮೀಶ್ ಮಾಹಿತಿ ನೀಡಿದರು.