ಬೆಂಗಳೂರು: ಆಪರೇಷನ್ ಸಿಂಧೂರ್: ಕೇವಲ ಒಂದು ಧ್ಯೇಯವಲ್ಲ, ಆದರೆ ಪವಿತ್ರ ಪ್ರತಿಜ್ಞೆ ಎಂದು ನಟ ಕಿಚ್ಚ ಸುದೀಪ್ ಬಣ್ಣಿಸಿದ್ದಾರೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ‘ಒಬ್ಬ ಭಾರತೀಯನಾಗಿ, ಈ ಪವಿತ್ರ ಮಣ್ಣಿನ ಮಗನಾಗಿ,
ಪಹಲ್ಗಾಮ್ನಲ್ಲಿ ನೋವಿನ ನಡುಕವನ್ನು ಅನುಭವಿಸಿದೆ. ಇಂದು, ನಾನು ನ್ಯಾಯದ ಗುಡುಗನ್ನು ಅನುಭವಿಸುತ್ತೇನೆ’ ಎಂದು ಹೇಳಿದ್ದಾರೆ.
‘ಭಾರತದ ಸಿಂಧೂರವು ಕಲೆ ಹಾಕಲ್ಪಟ್ಟಿತು. ನಮ್ಮ ಧೈರ್ಯಶಾಲಿ ಹೃದಯಗಳು ಬೆಂಕಿ ಮತ್ತು ನಿಖರತೆಯಿಂದ ಅದರ ಗೌರವವನ್ನು ಪುನಃಸ್ಥಾಪಿಸಿದವು’ ಎಂದು ಸುದೀಪ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.
‘ನಮ್ಮ ಸಶಸ್ತ್ರ ಪಡೆಗಳಿಗೆ, ನನ್ನ ಅಂತ್ಯವಿಲ್ಲದ ವಂದನೆ. ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ನಾಯಕತ್ವವು ನಿರ್ಭೀತವಾಗಿ ನಿಂತಿದ್ದಕ್ಕಾಗಿ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.
ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ತೀಕ್ಷ್ಣವಾದ, ಗೌರವಯುತ ಮಾಹಿತಿ ನೀಡಿದ್ದಾರೆ ಎಂದಿರುವ ಸುದೀಪ್, ಭಾರತ ಮರೆಯುವುದಿಲ್ಲ. ಭಾರತ ಕ್ಷಮಿಸುವುದಿಲ್ಲ’ ಎಂದು ಕಿಚ್ಚ ಬರೆದುಕೊಂಡಿರುವ ಸಾಲುಗಳೂ ಗಮನಸೆಳೆದಿದೆ.





































































