ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಇಂದು ರಾಜ್ಯ ಪ್ರವೇಶಿಸಿದ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಡಾ. ಎಚ್.ಸಿ. ಮಹಾದೇವಪ್ಪ, ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಹಾಜರಿದ್ದರು.
#BharathAikyataYatre ಹಾಗೂ ಶ್ರೀ ರಾಹುಲ್ ಗಾಂಧಿ ಅವರನ್ನು ಕನ್ನಡ ನಾಡು ತೆರೆದ ಬಾಹುಗಳಿಂದ ಸ್ವಾಗತಿಸಿದೆ.ನವ ಭಾರತ ನಿರ್ಮಾಣದ ಮತ್ತೊಂದು ಅಧ್ಯಯ ಆರಂಭವಾಗಿದೆ.
Karnataka welcomes #BharatJodoYatra & Sri @RahulGandhi with open arms at Gundlupet.
Another great chapter to build a better India begins today. pic.twitter.com/kVcKx3IY9g— DK Shivakumar (@DKShivakumar) September 30, 2022
ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯವರಿಗೆ ರೇಷ್ಮೆ ಹಾರ ಹಾಕುವ ಮೂಲಕ ಸ್ವಾಗತ ಕೋರಿದರು. ಬಳಿಕ ರಾಹುಲ್ ಗಾಂಧಿಯವರ ಕಾರಿನಲ್ಲಿ ವನಸಿರಿ ಹೋಟೆಲ್ ಗೆ ತೆರಳಿ ಉಪಾಹಾರ ಸೇವಿಸಿದರು.
ಐತಿಹಾಸಿಕ ಭಾರತ ಐಕ್ಯತಾ ಯಾತ್ರೆ ಕರ್ನಾಟಕವನ್ನು ಪ್ರವೇಶಿಸಿದೆ, ಗುಂಡ್ಲುಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ನಡೆಯುತ್ತಿರುವ ಸ್ವಾಗತ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದ @RahulGandhi ಅವರಿಗೆ ರಾಷ್ಟ್ರಧ್ವಜವನ್ನು ನೀಡಿ ಸ್ವಾಗತಿಸಲಾಯ್ತು.#BharataJodoYatra pic.twitter.com/B2yw0ewnJr
— Karnataka Congress (@INCKarnataka) September 30, 2022