ಬೆಳಗಾವಿ: ಕಣಿವೆ ರಾಜ್ಯ ಜಮ್ಮು – ಕಾಶ್ಮೀರದ ಪೊಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗರು ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದಾರೆ.
ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸೇನಾ ವಾಹನ 150 ಅಡಿ ಕಮರಿಗೆ ಉರುಳಿಬಿದ್ದು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕರ್ನಾಟಕದ ಮೂವರು ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದಾರೆ. ಒಬ್ಬ ಯೋಧ ಗಾಯಗೊಂಡಿದ್ದರು.
ಬೆಳಗಾವಿ ಜಿಲ್ಲೆ ಸಾಂಬ್ರಾ ಗ್ರಾಮದ 45 ವರ್ಷದ ಸುಬೇದಾರ್ ದಯಾನಂದ ತಿರಕಣ್ಣವರ, ಉಡುಪಿ ಜಿಲ್ಲೆ ಕೋಟೇಶ್ವರ ಬಿಜಾಡಿಯ 33 ವರ್ಷದ ಅನೂಪ್, ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಎಂಬವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.