ತುಮಕೂರು: ಜಾತ್ರೆಯಲ್ಲಿ ಕಲುಷಿತ ನೀರು ಅವಾಂತರ ಸೃಷ್ಟಿಸಿದೆ. ಮಧುಗಿರಿ ಸಮೀಪದ ಚಿನ್ನೇನಹಳ್ಳಿಯಲ್ಲಿನ ಜಾತ್ರೆ ಮಹೋತ್ಸವದಲ್ಲಿ ಕಲುಷಿತ ನೀರು ಸೇವಿಸಿ ಹಲವರು ವಾಂತಿ ಭೇದಿ ನಿಶಕ್ತಿಯಿಂದ ಬಳಲುತ್ತಿದ್ದಾರೆ. ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ.
ಹಲವರು ಮಧುಗಿರಿ ತಾಲೂಕು ಆಸ್ಪತ್ರೆ, ತುಮಕೂರು ಜಿಲ್ಲಾ ಆಸ್ಪತ್ರೆ ಹಾಗೂ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರರಲ್ಲಿ ಮೂವರು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ ಎನ್ನಲಾಗಿದೆ.