ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಧಿಡೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.
ಭೇಟಿ ಸಮಯದಲ್ಲಿ, ಕಾರಾಗೃಹದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ರಾಜ್ಯ ಕಾರಾಗೃಹಗಳ ಮುಖ್ಯಸ್ಥ, ಅಲೋಕ್ ಮೋಹನ್ ಅವರೂ ಉಪಸ್ಥಿತರಿದ್ದರು.







































































