ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ–ಅಮಿತ್ ಶಾ ಜೋಡಿಯ ತಂತ್ರಗಾರಿಕೆಗೆ ಭಾರೀ ಫಲ ದೊರಕಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಸ್ಪಷ್ಟ ಬಹುಮತದೊಂದಿಗೆ ಅಧಿಕಾರದತ್ತ ದಾಪುಗಾಲಿಟ್ಟಿದೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಈ ಬಾರಿ ನಿರಾಶಾದಾಯಕ ಫಲಿತಾಂಶ ಎದುರಾಗಿದೆ.
ಒಟ್ಟು 293 ಸ್ಥಾನಗಳಲ್ಲಿ ಬಿಜೆಪಿ 206 ಕ್ಷೇತ್ರಗಳನ್ನು ಗೆದ್ದು ದ್ವಿಶತಕ ಬಾರಿಸಿದ್ದು, ಭಾರೀ ಮೇಲುಗೈ ಸಾಧಿಸಿದೆ. ಇತ್ತ ಟಿಎಂಸಿ ಕೇವಲ 81 ಸ್ಥಾನಗಳಿಗೆ ಸೀಮಿತವಾಗಿ ಅಧಿಕಾರ ಕಳೆದುಕೊಂಡಿದೆ. ಕಾಂಗ್ರೆಸ್ 2 ಸ್ಥಾನಗಳಲ್ಲಿ ಜಯಗಳಿಸಿದ್ದು, ಇತರೆ ಪಕ್ಷಗಳು 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.
ನಾಲ್ಕನೇ ಬಾರಿ ಮುಖ್ಯಮಂತ್ರಿ ಪಟ್ಟಕ್ಕೇರಲು ಉತ್ಸಾಹದಲ್ಲಿದ್ದ ಮಮತಾ ಬ್ಯಾನರ್ಜಿ ಅವರಿಗೆ ಈ ಚುನಾವಣೆಯಲ್ಲಿ ಭಾರೀ ಹಿನ್ನಡೆ ಎದುರಾಗಿದೆ. ತಮ್ಮ ತವರು ಕ್ಷೇತ್ರ ಭವಾನಿಪುರದಲ್ಲಿಯೇ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಎದುರು ಸೋಲು ಕಂಡಿರುವುದು ಟಿಎಂಸಿ ಶಿಬಿರಕ್ಕೆ ಮತ್ತಷ್ಟು ಆಘಾತ ತಂದಿದೆ.
ರಾಜಕೀಯ ವಿಶ್ಲೇಷಕರ ಪ್ರಕಾರ, ಬಂಗಾಳದ ರಾಜಕೀಯ ರಣಾಂಗಣದಲ್ಲಿ ಬಿಜೆಪಿ ಸಂಘಟಿತ ತಂತ್ರ ಮತ್ತು ಭರ್ಜರಿ ಪ್ರಚಾರ ಕಾರ್ಯ ಈ ಫಲಿತಾಂಶಕ್ಕೆ ಪ್ರಮುಖ ಕಾರಣವಾಗಿದೆ. ಇತ್ತ ಟಿಎಂಸಿ ಸರ್ಕಾರದ ವಿರುದ್ಧದ ವಿರೋಧ ಅಲೆ ಸಹ ಪಕ್ಷದ ಸೋಲಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
- ಪಕ್ಷವಾರು ಅಂತಿಮ ಬಲಾಬಲ ಹೀಗಿದೆ:
- BJP- 206
- AITC – 81
- INC – 2
- AJUP – 2
- CPI(M) – 1
























































