ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಿದ್ಧವಿಲ್ಲದ ಬಿಜೆಪಿ ಉತ್ತರ ಕರ್ನಾಟಕ ವಿರೋಧಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ರಾಜ್ಯದ 223 ತಾಲೂಕುಗಳಲ್ಲಿ ಬರಗಾಲವಿದ್ದು, ಕುಡಿಯುವ ನೀರು, ಕೆಲಸ ನೀಡುವುದು, ಗುಳೆ ತಪ್ಪಿಸುವುದು, ದನ-ಕರುಗಳಿಗೆ ಮೇವು ಸೇರಿದಂತೆ ಸರ್ಕಾರದಿಂದ ಎಲ್ಲ ಕ್ರಮ ಕೈಗೊಂಡಿದ್ದೇವೆ ಎಂದಿದ್ದಾರೆ.
ಪ್ರವಾಹ, ಬರಗಾಲದಂತಹ ಸಂದರ್ಭದಲ್ಲಿ ಉದ್ಯೋಗ ಖಾತರಿ ಕೆಲಸದ ದಿನಗಳನ್ನು 150ಕ್ಕೆ ಹೆಚ್ಚಿಸುವಂತೆ ಕೇಂದ್ರವನ್ನು ಕೋರಿದ್ದರೂ ಇಲ್ಲಿಯವರೆಗೂ ಅನುಮತಿ ನೀಡಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.
ಜನರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಚರ್ಚೆ ಮಾಡದೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಿದ್ಧವಿಲ್ಲದ ಬಿಜೆಪಿ ಉತ್ತರ ಕರ್ನಾಟಕ ವಿರೋಧಿಯಾಗಿದೆ ಎಂದವರು ದೂರಿದ್ದಾರೆ.
ರಾಜ್ಯದ 223 ತಾಲೂಕುಗಳಲ್ಲಿ ಬರಗಾಲವಿದ್ದು, ಕುಡಿಯುವ ನೀರು, ಕೆಲಸ ನೀಡುವುದು, ಗುಳೆ ತಪ್ಪಿಸುವುದು, ದನ-ಕರುಗಳಿಗೆ ಮೇವು ಸೇರಿದಂತೆ ಸರ್ಕಾರದಿಂದ ಎಲ್ಲ ಕ್ರಮ ಕೈಗೊಂಡಿದ್ದೇವೆ.
ಪ್ರವಾಹ, ಬರಗಾಲದಂತಹ ಸಂದರ್ಭದಲ್ಲಿ ಉದ್ಯೋಗ ಖಾತರಿ ಕೆಲಸದ ದಿನಗಳನ್ನು 150ಕ್ಕೆ ಹೆಚ್ಚಿಸುವಂತೆ ಕೇಂದ್ರವನ್ನು ಕೋರಿದ್ದರೂ ಇಲ್ಲಿಯವರೆಗೂ ಅನುಮತಿ ನೀಡಿಲ್ಲ.… pic.twitter.com/tIFXyUrJBC
— Karnataka Congress (@INCKarnataka) December 12, 2023