ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರು ಇಂದು ನಾಮಪತ್ರ ಸಲ್ಲಿಸಿದರು.
ಮುತ್ಯಾಲಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು, ಬನ್ನಪ್ಪ ಪಾರ್ಕಿನ ಸಭಾ ಕಾರ್ಯಕ್ರಮದ ಬಳಿಕ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ವಿಪಕ್ಷ ನಾಯಕ ಆರ್.ಅಶೋಕ್, ಮುಖಂಡರಾದ ಸಿ.ಟಿ.ರವಿ, ಅರವಿಂದ ಲಿಂಬಾವಳಿ, ಸುರೇಶ್ಕುಮಾರ್, ಜನಾರ್ದನ ರೆಡ್ಡಿ, ಎಸ್.ರಘು, ಗೋಪಿನಾಥ ರೆಡ್ಡಿ, ಗುರುರಾಜ ಗಂಟಿಹೊಳೆ, ನೆ.ಲ.ನರೇಂದ್ರ ಬಾಬು, ತಾರಾ ಅನುರಾಧ, ಶ್ರುತಿ, ಕೇಂದ್ರ ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು. ಬನ್ನಪ್ಪ ಪಾರ್ಕಿನಿಂದ ಬಿಬಿಎಂಪಿ ತನಕ ರೋಡ್ ಷೋ ನಡೆಯಿತು.