ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ರಾಜಧಾನಿಯಲ್ಲಿ ಮತ್ತೊಂದು ಭವ್ಯ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಮುಂದಾಗಿದೆ. ಬೊಮ್ಮಸಂದ್ರದ ಸೂರ್ಯನಗರ ಸಮೀಪ 100 ಎಕರೆ ಪ್ರದೇಶದಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಸೌಲಭ್ಯಗಳು ಲಭ್ಯವಾಗಲಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಕರ್ನಾಟಕ ವಸತಿ ಮಂಡಳಿಯ (KHB) ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ. ಒಳಾಂಗಣ ಮತ್ತು ಹೊರಾಂಗಣ ತಲಾ ಎಂಟು ಕ್ರೀಡೆಗಳ ಮೈದಾನ, ಅತ್ಯಾಧುನಿಕ ಜಿಮ್, ತರಬೇತಿ ಕೇಂದ್ರ, ಈಜುಕೊಳ, ಅತಿಥಿ ಗೃಹ, ಹಾಸ್ಟೆಲ್ಗಳು, ತ್ರೀ-ಸ್ಟಾರ್ ಹಾಗೂ ಫೈವ್-ಸ್ಟಾರ್ ಹೋಟೆಲ್ಗಳು, ಮತ್ತು ಅಂತರರಾಷ್ಟ್ರೀಯ ಕಾರ್ಯಕ್ರಮಗಳಿಗೆ ಸಮಾವೇಶ ಸಭಾಂಗಣ—all in one ಸಂಕೀರ್ಣ ರೂಪ ಪಡೆಯಲಿದೆ.
ನಿರ್ಮಾಣಗೊಳ್ಳುವ ಕ್ರಿಕೆಟ್ ಕ್ರೀಡಾಂಗಣ, ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಭಾರತದ ಎರಡನೇ ಅತಿದೊಡ್ಡದಾಗಲಿದೆ. ನರೇಂದ್ರ ಮೋದಿ ಸ್ಟೇಡಿಯಂ 1,32,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿದೆ.
ಒಟ್ಟು ₹1,650 ಕೋಟಿ ವೆಚ್ಚದ ಈ ಯೋಜನೆಗೆ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನವಿಲ್ಲ. ಸಂಪೂರ್ಣ ವೆಚ್ಚವನ್ನು ವಸತಿ ಮಂಡಳಿಯೇ ಹೊರುವುದಾಗಿ ತಿಳಿಸಲಾಗಿದೆ.



























































