ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಇತ್ತೀಚೆಗೆ ಸಂಭವಿಸಿದ ಐಇಡಿ ಸ್ಫೋಟದ ಹಿಂದೆ ಮಹತ್ವದ ಸಂಚು ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಘಟನೆಯನ್ನು ಲಘುವಾಗಿ ಪರಿಗಣಿಸುವುದರಿಂದ ಭಯೋತ್ಪಾದಕರಿಗೆ ಧೈರ್ಯ ತುಂಬುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ಸಮಗ್ರ ತನಿಖೆ ನಡೆಯಬೇಕಿದೆ. ಹಾಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ತನಿಖೆಯನ್ನು ವಹಿಸಬೇಕೆಂದು ಆಗ್ರಹಿಸಿದರು.




























































