ವಿಜಯನಗರ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ರೀತಿಯಲ್ಲಿ ಘಟನೆಗಳು ಆಗಿವೆ, ಆಗಿಲ್ಲಾ ಅಂತ ನಾನು ಹೇಳುವುದಿಲ್ಲ. ಆದರೆ, ಹಿಂದಿನವರು ಏನು ಪಾಲನೆ ಮಾಡಿದ್ದರು, ಅದನ್ನು ಈಗಿನ ಸರ್ಕಾರವೂ ಮಾಡಬೇಕು. ಆದರೆ, ಇದೊಂದು ಭಂಡ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಾವಿನ ವಿಚಾರದಲ್ಲಿ ಈಶ್ವರಪ್ಪನವರದ್ದೇನು ಕೂಡ ತಪ್ಪಿರಲಿಲ್ಲ ಆದರೂ, ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಈಶ್ವರಪ್ಪ ಅವರ ವಿಚಾರದಲ್ಲಿ ವಿಪಕ್ಷನಾಯಕರಿದ್ದ ಸಿದ್ದರಾಮಯ್ಯನವರು ಮಾಡಿದ ರೋಷಾವೇಶ ಈಗ ಯಾಕೆ ಇಲ್ಲಾ. ಈಗ ಅವರೇ ಸಿಎಂ, ಅವರ ಸಚಿವ ಸಂಪುಟದ ಸಚಿವರ ವ್ಯಾಪ್ತಿಯ ವಾಲ್ಮೀಕಿ ನಿಗಮ್ ಹಣ ಲೂಟಿ ಆಗಿದೆ. 14 ಅಕೌಂಟ್ ಗಳ ಮೂಲಕ ಹಗಲು ದರೊಡೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಡೆತ್ ನೋಟ್ ನಲ್ಲಿ ಎರಡು ಬಾರಿ ಸಚಿವ ನಾಗೇಂದ್ರ ಅವರ ಮೌಖಿಕ ಆದೇಶ ಇತ್ತು ಎಂದು ಉಲ್ಲೇಖ ಮಾಡಿದ್ದಾರೆ
ಆದರೆ, ಇವರು ರಾಜೀನಾಮೆ ತೆಗೆದುಕೊಳ್ಳುವ ನೈತಿಕತೆ ಇಲ್ಲ. ಇದೊಂದು ಭ್ರಷ್ಟಾಚಾರ ಕೂಟದ ಸರ್ಕಾರ ಎಂದು ಆರೋಪಿಸಿದರು.
ಈ ಪ್ರಕರಣಕ್ಕೂ, ಈಶ್ವರಪ್ಪನವರ ಪ್ರಕರಣಕ್ಕೂ ಹೊಂದಾಣಿಕೆ ಮಾಡುತ್ತಾರೆ, ನಾಚಿಕೆಯಾಗಬೇಕು ಇವರಿಗೆ. ಬಹುಕೋಟಿ ಹಗರಣ ಇದು, ಒಂದೇ ದಿನದಲ್ಲಿ 14 ಅಕೌಂಟ್ ಗೆ ಮಾಯ ಆಗುತ್ತದೆ. ಅಂದರೆ ಸಂಶಯಾಸ್ಪದ ಅಕೌಂಟ್ ಗಳಿಗೆ ಹೋಗಿದೆ
ಇದು ಸಿಬಿಐ ಗೆ ಹೋಗುವಂತಹ ಮುಖ್ಯವಾದ ಕೇಸ್. ಒಂದು ಬ್ಯಾಂಕ್ ಮುಖಾಂತರ ಬೇರೆ ರಾಜ್ಯಕ್ಕೆ ಹಣ ಹೋಗಿದೆ. 10 ಕೋಟಿಗೆ ಹೆಚ್ಚು ಹಗರಣ ಅವ್ಯವಹಾರ ಆಗಿದ್ದರೆ,, ಅದು ಸಿಬಿಐ ತನಿಖೆಗೆ ಹೋಗಬೇಕು ಅಂತ ಇದೆ. ಆದರೆ, ಇವರು ಯಾಕೆ ಸಿಬಿಐಗೆ ಕೊಡುತ್ತಿಲ್ಲ,, ಸಿಒಡಿ ತನಿಖೆ ಮಾಡಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಚುನಾವಣೆ ಸಮಯದಲ್ಲಿ ಹೈದ್ರಾಬಾದ್ ನ ಒಂದು ಸಹಕಾರಿ ಬ್ಯಾಂಕ್ ಗೆ ಹಣ ವರ್ಗಾವಣೆ ಆಗುತ್ತದೆ ಅಂದರೆ, ರಾಜಕೀಯದಿಂದ ಚುನಾವಣೆಗಾಗಿ ನಡೆದಿರುವ ದರೋಡೆ ಪ್ರಕರಣ ಇದು. ಸರ್ಕಾರ ಏನೇ ಸಮಾಜಾಯಿಸಿ ಕೊಟ್ಟರೂ ಕೂಡ, ಡಿಜಿಟಲ್ ಟ್ರಾಕ್, ಡಿಜಿಟಲ್ ಎವಿಡೆನ್ಸ್ ಇರುವ ಕಾರಣ ಸಿಒಡಿಯಿಂದ ತನಿಖೆಯಾಗುವ ಪ್ರಕರಣ ಅಲ್ಲ. ಈ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ಕೊಡಬೇಕು, ಸಿಬಿಐ ತನಿಖೆಗೆ ಒಳಪಡಿಸಿ ಎಲ್ಲಾ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ಹಣ ವಾಪಾಸ್ ಬರಬೇಕು. ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡಿದರೆ ಹಣ ವಾಪಾಸ್ ತರಬಹುದು, ಚುನಾವಣೆಗೆ ಬಳಕೆಯಾಗಿದ್ರೆ ಏನು ಮಾಡಲು ಆಗುವುದಿಲ್ಲ. ಈ ಪ್ರಕರಣದಲ್ಲಿ ಮನಿ ಟ್ರೈಲ್ ಫಾಲೋ ಮಾಡಬೇಕು ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಎಸ್ ಸಿ, ಎಸ್ ಟಿ ಸಮಾಜಕ್ಕೆ ಓಟ್ ಬ್ಯಾಂಕ್ ಆಗಿ ಪರಿವರ್ತನೆ ಮಾಡುವುದು ಬಿಟ್ಟರೆ ಬೇರೆನೂ ಪ್ರಯೋಜನವಿಲ್ಲ. ಎಸ್ಸಿ, ಎಸ್ಟಿ ಸಮುದಾಯದವರು ಮೀಸಲಾತಿ ಹೋರಾಟ ಮಾಡಿದ್ದರೂ ಹೆಚ್ಚಳ ಮಾಡಲಿಲ್ಲಾ ನಾವು ಮೀಸಲಾತಿ ಹೆಚ್ಚಳ ಮಾಡಿದ್ದೇವು. ಇವರು ಬಂದ ಮೇಲೆ ಎಸ್ಸಿಪಿ ಟಿಎಸ್ಪಿ ಹಣ ಕಡಿತವಾಗಿದೆ. ಎಸ್ಸಿ ಎಸ್ಟಿ ಜನಾಂಗಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಹೇಳಿದರು.


























































