ಬೆಂಗಳೂರು: ಹೃದಯಾಘಾತದಿಂದ ನಿಧನರಾದ ನಟ ದ್ವಾರಕೀಶ್ ಅವರ ಅಂತ್ಯ ಸಂಸ್ಕಾರ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.
ಬೆಂಗಳೂರಿನಲ್ಲಿ ಗಣ್ಯರ, ಅಭಿಮಾನಿಗಳ ಶ್ರದ್ಧಾಂಜಲಿ ಬಳಿಕ ಚಾಮರಾಜಪೇಟೆಯ ಟಿ.ಆರ್.ಮಿಲ್ ಹಿಂದೂ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ದ್ವಾರಕೀಶ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ದ್ವಾರಕೀಶ್ ಅವರ ಹಿರಿಯ ಮಗ ಯೋಗೇಶ್ ಅವರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಸಿಎಂ ಸಿದ್ದರಾಮಯ್ಯ ಸಹಿತ ಗಣ್ಯರನೇಕರು ದ್ವಾರಕೀಶ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಸಿನಿಮಾ ನಟ-ನಟಿಯರು ಸೇರಿದಂತೆ ಚಿತ್ರೋದ್ಯಮದ ಗಣ್ಯರೂ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.
ನಿನ್ನೆ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪ ನಮನ ಅರ್ಪಿಸಿದೆ.#ದ್ವಾರಕೀಶ್ pic.twitter.com/apDsFD2DUM
— Siddaramaiah (@siddaramaiah) April 17, 2024