ನವದೆಹಲಿ: ಕೇಂದ್ರ ಸರ್ಕಾರವು ತುಷಾರ್ ಮೆಹ್ತಾ ಅವರನ್ನು ಭಾರತದ ಸಾಲಿಸಿಟರ್ ಜನರಲ್ ಆಗಿ ಮತ್ತೊಮ್ಮೆ ಮೂರು ವರ್ಷಗಳ ಅವಧಿಗೆ ಮರು ನೇಮಕ ಮಾಡಿದೆ. ಜುಲೈ 1, 2026ರಿಂದ ಈ ನೇಮಕಾತಿ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಅವರು ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.
ಕ್ಯಾಬಿನೆಟ್ನ ನೇಮಕಾತಿ ಸಮಿತಿ (ACC) ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು, ಮೆಹ್ತಾ ಅವರು ದೇಶದ ಎರಡನೇ ಅತ್ಯುನ್ನತ ಕಾನೂನು ಅಧಿಕಾರಿಯಾಗಿ ಸೇವೆ ಮುಂದುವರಿಸಲಿದ್ದಾರೆ. 2018ರಲ್ಲಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿದ್ದ ಅವರು, 2020 ಮತ್ತು 2023ರಲ್ಲೂ ಮರು ನೇಮಕಗೊಂಡಿದ್ದರು.
ಇತ್ತೀಚಿನ ವಿಸ್ತರಣೆಯೊಂದಿಗೆ ಮೆಹ್ತಾ ಅವರು ಸುಮಾರು 11 ವರ್ಷಗಳ ಕಾಲ ಈ ಹುದ್ದೆಯಲ್ಲಿ ಸೇವೆ ಸಲ್ಲಿಸಲಿದ್ದು, ದೇಶದ ಇತಿಹಾಸದಲ್ಲೇ ದೀರ್ಘಾವಧಿ ಸೇವೆ ಸಲ್ಲಿಸಿದ ಕಾನೂನು ಅಧಿಕಾರಿಗಳಲ್ಲಿ ಒಬ್ಬರಾಗಲಿದ್ದಾರೆ.

ಇದರ ಜೊತೆಗೆ, ಸುಪ್ರೀಂ ಕೋರ್ಟ್ಗೆ ಐದು ಹೆಚ್ಚುವರಿ ಸಾಲಿಸಿಟರ್ ಜನರಲ್ಗಳಾದ ವಿಕ್ರಮ್ಜಿತ್ ಬ್ಯಾನರ್ಜಿ, ಕೆ.ಎಂ. ನಟರಾಜ್, ಎಸ್.ವಿ. ರಾಜು, ಎನ್. ವೆಂಕಟರಾಮನ್ ಹಾಗೂ ಐಶ್ವರ್ಯಾ ಭಾಟಿ ಅವರನ್ನು ಸಹ ಮೂರು ವರ್ಷಗಳ ಅವಧಿಗೆ ಮರು ನೇಮಕ ಮಾಡಲಾಗಿದೆ.
ಪ್ರತ್ಯೇಕ ಆದೇಶದಲ್ಲಿ, ದೆಹಲಿ ಹೈಕೋರ್ಟ್ನ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಚೇತನ್ ಶರ್ಮಾ ಅವರನ್ನು ಆರು ತಿಂಗಳ ಅವಧಿಗೆ ಮರು ನೇಮಕ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಸಾಲಿಸಿಟರ್ ಜನರಲ್ ಆಗಿ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್ ಹಾಗೂ ವಿವಿಧ ಹೈಕೋರ್ಟ್ಗಳಲ್ಲಿ ಕೇಂದ್ರ ಸರ್ಕಾರದ ಪರ ಹಲವು ಮಹತ್ವದ ಸಾಂವಿಧಾನಿಕ ಮತ್ತು ಕಾನೂನು ವಿಚಾರಗಳಲ್ಲಿ ವಾದ ಮಂಡಿಸಿದ್ದಾರೆ.





































































