ಬೆಂಗಳೂರು ನಗರದ ಅಭಿವೃದ್ಧಿ ವಿರೋಧಿಗಳು ಹಾಗೂ ಸುರಂಗ ಮಾರ್ಗದ ಬಗ್ಗೆ ಸುಳ್ಳಿನ ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಪಕ್ಷದ ನಾಯಕರ ಆಧಾರ ರಹಿತ ಹೇಳಿಕೆ ವಿರುದ್ಧ ಪತ್ರಿಕಾಗೋಷ್ಠಿಯ ಮೂಲಕ ಬಿಜೆಪಿಯ ಭ್ರಷ್ಟಾಚಾರಿಗಳ ಅವೈಜ್ಞಾನಿಕ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ಬಳಿ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಕೆಪಿಸಿಸಿ ಮಾಧ್ಯಮ ವಕ್ತಾರರಾದ ಎಂ. ಲಕ್ಷ್ಮಣ್, ಕೆಪಿಸಿಸಿ ನಾಯಕರಾದ ಎಸ್.ಮನೋಹರ್, ಸುಧಾಕರ್, ಆನಂದ್, ಪುಟ್ಟರಾಜು, ಕುಶಾಲ್ ಹರುವೇಗೌಡ, ನವೀನ್ ಜಂಟಿ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರುನಗರ ಅಭಿವೃದ್ದಿ ಕೆಲಸಗಳಿಗೆ ವಿರೋಧಿಸುತ್ತಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ತೇಜಸ್ವಿಸೂರ್ಯ ನಡೆಯನ್ನು ಖಂಡಿಸಿದರು.
ಎಂ.ಲಕ್ಷ್ಮಣ್ ರವರು ಮಾತನಾಡಿ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸವನ್ನು ಬಿಜೆಪಿ ಪಕ್ಷ ಮಾಡುತ್ತಿದೆ. ಟನಲ್ ಮಾಡುವುದಕ್ಕೆ ಖಾಸಗಿ ಸಹಬಾಗಿತ್ವದಲ್ಲಿ ಕಾಮಗಾರಿ ನಡೆಯುತ್ತದೆ ಇದರಲ್ಲಿ ಏನು ಸಿಗುವುದಿಲ್ಲ ಎಂದು ಅಶೋಕ್, ತೇಜಸ್ವಿಸೂರ್ಯ ಕೊರಗುತ್ತಿದ್ದಾರೆ ಎಂದು ಟೀಕಿಸಿದರು.
ನಮ್ಮ ಸರ್ಕಾರ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುತ್ತಿದೆ ಎಂದ ಅವರು, ಬಗರ್ ಹುಕುಂ ಸರ್ಕಾರಿ ಭೂಮಿಯನ್ನು ಆರ್.ಅಶೋಕ್ ರವರು ತನ್ನ ಹಿಂಬಾಲಕರಿಗೆ ಜಮೀನು ಮಂಜೂರು ಮಾಡಿ ಭೂ ಹಗರಣವನ್ನು ಮಾಡಿ ಸಿಲುಕಿದ್ದಾರೆ ಎಂದು ಆರೋಪಿಸಿದರು.
ವಿಶ್ವದಲ್ಲಿ ಅತಿವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಬೆಂಗಳೂರು ನಗರ ಮೊದಲನೇ ಸ್ಥಾನದಲ್ಲಿದೆ ರಾಜ್ಯದಲ್ಲಿ 4 ಲಕ್ಕಕ್ಕೂ ಹೆಚ್ಚು ಕೋಟಿ ಹಣ ತೆರಿಗೆ ಸಂಗ್ರಹವಾಗುತ್ತಿದೆ ಅದರಲ್ಲಿ ಶೇಕಡ 50 ಪರ್ಸೆಂಟ್ ಬೆಂಗಳೂರು ನಗರದಿಂದ ಕೇಂದ್ರ ಸರ್ಕಾರಕ್ಕೆ ಹೋಗುತ್ತಿದೆ. ಅದರೆ ಯಾವುದೇ ಅಭಿವೃದ್ದಿ ಕಾರ್ಯಕ್ಕೆ ಕೇಂದ್ರ ಸರ್ಕಾರ ಹಣ ನೀಡುತ್ತಿಲ್ಲ ಎಂದು ಆರೋಪಿಸಿದರು.
ಮೆಟ್ರೋ ರೈಲು ಯೋಜನೆಗೆ ರಾಜ್ಯ ಸರ್ಕಾರ ಶೇಕಡ 85ರಷ್ಟು ಹಣ ನೀಡುತ್ತಿದೆ ವಾಹನಗಳು ಬೀದಿಯಲ್ಲಿ ನಿಲ್ಲಿಸಿದರೆ ಪಾರ್ಕಿಂಗ್ ಫೀಸ್ ಕೊಡಬೇಕು ಅಂತಾರೆ ಬಿಜೆಪಿಯವರು ತೇಜಸ್ವಿಸೂರ್ಯ ಮನೆಯಲ್ಲಿ ಆರು ಕಾರುಗಳು ಇದೆ , ಅವರು ಎಲ್ಲಿ ವಾಹನವನ್ನು ನಿಲ್ಲಿಸುತ್ತಾರೆ ಎಂದು ತಿಳಿಸಲಿ ಎಂದು ಸವಾಲು ಹಾಕಿದರು.
ಟನಲ್ ವೈಜ್ಞಾನಿಕವಾಗಿ ತಂತ್ರಜ್ಞರ ಸಲಹೆ ಮೇರೆಗೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು ಬಿಜೆಪಿ ಪಕ್ಷದ ನಾಯಕರು ಜನರಲ್ಲಿ ಗೊಂದಲದ ವಾತಾವರಣವನ್ನು ಸೃಷ್ಟಿಸಿ ,ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ರವರು ಸುರಂಗ ಮಾರ್ಗದ ಯೋಜನೆಗೆ ಚಾಲನೆ ನೀಡಿ ಅನೇಕ ಸುರಂಗ ಮಾರ್ಗವನ್ನು ಉದ್ಘಾಟಿಸಿದ್ದಾರೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ರವರು ಸುರಂಗ ಮಾರ್ಗವೇ ಬೆಂಗಳೂರು ಅಭಿವೃದ್ಧಿಗೆ ಪರ್ಯಾಯ ಎಂಬುದಾಗಿ ಹೇಳಿ ಸಂಚಾರಿ ದಟ್ಟಣೆಯನ್ನು ನಿಯಂತ್ರಿಸಬೇಕಾದರೆ ಸುರಂಗ ಮಾರ್ಗ ಅಗತ್ಯವೆಂದು ತಿಳಿಸಿದ್ದಾರೆ. ಆದರೆ ಬಿಜೆಪಿಯ ಭ್ರಷ್ಟ ನಾಯಕರು ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಮರೆಮಾಚಲು ಸುಳ್ಳಿನ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.


















































