ಬೆಂಗಳೂರ: ರಾಜ್ಯದ ವಿವಿಧ ಜಿಲ್ಲೆಗಳ ಘಟಕಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. 10 ಜಿಲ್ಲಾ ಘಟಕಗಳಿಗೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ. ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ:
- ಮೈಸೂರು ಗ್ರಾಮಾಂತರ – ಕೆಎನ್ ಸುಬ್ಬಣ್ಣ.
- ಹಾಸನ – ಸಿದ್ದೇಶ್ ನಾಗೇಂದ್ರ.
- ಕೊಡಗು – ರವಿ ಕಾಳಪ್ಪ
- ಉಡುಪಿ – ಕುತ್ಯಾರು ನವೀನ್ ಶೆಟ್ಟಿ
- ದಾವಣಗೆರೆ – ಎನ್ ರಾಜಶೇಖರ
- ಹಾವೇರಿ – ವಿರೂಪಾಕ್ಷಪ್ಪ ಬಳ್ಳಾರಿ
- ಚಿತ್ರದುರ್ಗ – ಕೆ.ಟಿ. ಕುಮಾರಸ್ವಾಮಿ
- ತುಮಕೂರು – ಎಚ್.ಎಸ್. ರವಿಕುಮಾರ್
- ಮಧುಗಿರಿ – ಚಿದಾನಂದ ಗೌಡ
- ಚಿಕ್ಕಬಳ್ಳಾಪುರ – ಎಸ್.ವಿ. ರಾಮಚಂದ್ರ ಗೌಡ