ನವದೆಹಲಿ: ಕೊಲಿಜಿಯಂ ಶಿಫಾರಸು ಮಾಡಿದ್ದ ಐವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್ಗೆ ಪದೋನ್ನತಿ ನೀಡಲು ಕೇಂದ್ರ ಸರ್ಕಾರ ಸಮ್ನತಿಸಿದೆ. ಐವರು ನ್ಯಾಯಮೂರ್ತಿಗಳ ಪದೋನ್ನತಿಗೆ ಹೆಸರುಗಳಿಗೆ ಕೇಂದ್ರ ಸರ್ಕಾರ ಶನಿವಾರ ಅನುಮೋದನೆ ನೀಡಿದ್ದು, ಇವರು ಮುಂದಿನ ವಾರದ ಆರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿಲಿದ್ದಾರೆ. ಇದರೊಂದಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 32ಕ್ಕೆ ಏರಿಕೆಯಾಗಲಿದೆ.
ಸುಪ್ರೀಂ ಕೋರ್ಟ್ಗೆ ನೇಮಕವಾಗಿರುವ ಐವರು ನ್ಯಾಯಧೀಶರು:
- ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿಥಾಲ್,
- ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್,
- ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ ವಿ ಸಂಜಯ್ ಕುಮಾರ್,
- ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ,
ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಮನೋಜ್ ಮಿಶ್ರಾ.
As per the provisions under the Constitution of India, Hon’ble President of India has appointed the following Chief Justices and Judges of the High Courts as Judges of the Supreme Court.
I extend best wishes to all of them. pic.twitter.com/DvtBTyGV42— Kiren Rijiju (मोदी का परिवार) (@KirenRijiju) February 4, 2023