ದೆಹಲಿ: ಭವ್ಯ ಭಾರತದ ಸಮಸ್ತ ಪ್ರಜೆಗಳ ಮಹತ್ವಾಕಾಂಕ್ಷೆಯ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಇದ್ದ ಎಲ್ಲಾ ಅಡೆ ತಡೆಗಳೂ ನಿವಾರಣೆಯಾಗಿದ್ದು ಮೂರು ವರ್ಷಗಳಲ್ಲಿ ಭವ್ಯ ದೇಗುಲ ನಿರ್ಮಾಣವಾಗಲಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ಇನ್ನು ಮುಂದೆ ಮನೆ ಮನೆ ತೆರಳಿ ದೇಣಿಗೆ ಸಂಗ್ರಹಿಸಲಾಗುವುದಿಲ್ಲ ಎಂದಿದ್ದಾರೆ.
ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದ್ದು, ಅಂದಾಜಿಸಿದಂತೆ ಸುಮಾರು ಎರಡೂವರೆ ಸಾವಿರ ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ ಎಂದಿರುವ ಅವರು, ಮೂರು ವರ್ಷಗಳ ಕಾಲ ನಿರ್ಮಾಣ ಕಾರ್ಯ ತಡೆಯಿಲ್ಲದೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ಸುಮಾರು 107 ಎಕರೆ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ. ಇದಕ್ಕಾಗಿ ದೇಶಾದ್ಯಂತ 9 ಲಕ್ಷ ಸ್ವಯಂಸೇವಕರು ಸುಮಾರು 10 ಕೋಟಿ ಮನೆಗಳಿಂದ ದೇಣಿಗೆ ಸಂಗ್ರಹಿಸಿದ್ದಾರೆ. ಈ ಮೂಲಕ ಮಂದಿರ ನಿರ್ಮಾಣದಲ್ಲಿ ಸರ್ವಭಕ್ತರ ಸಹಭಾಗಿತ್ವ ಇದೆ ಎಂಬುದನ್ನು ಸಂಘಪರಿವಾರ ತೋರಿಸಿಕೊಟ್ಟಿದೆ ಎಂದು ವಿಶ್ವಹಿಂದೂ ಪರಿಷತ್ ನಾಯಕರು ಬಣ್ಣಿಸಿದ್ದಾರೆ.