ಗದಗ: ಸಿಎಂ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ವಿಚಾರಕ್ಕೆ ಗದಗನಲ್ಲಿ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ರೀತಿಯ ಉಹಾಪೋಹಗಳಿಗೆ ನಾವು ಬಲಿ ಆಗೋದು ಬೇಡ ಎಂದಿದ್ದಾರೆ.
ಸಿಎಂ ಬಿ ಎಸ್ ಯಡಿಯೂರಪ್ಪ ನಮ್ಮ ಸರ್ಕಾರ ಬಂದ ಮೇಲೆ ಬಹಳ ಚಾಲೆಂಜ್ ಎದುರಿಸಿದ್ದಾರೆ.ಅತಿವೃಷ್ಟಿ ಅನಾವೃಷ್ಟಿ, ಕೋವಿಡ್ ಕಾಲದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರೇ ಸಿಎಂ ಆಗಿ ಮುಂದೆವರಿಯುತ್ತಾರೆ, ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆಗೆ ಹೋಗುತ್ತೇವೆ ಎಂದು ಶಸಿಕಲಾ ಜೊಲ್ಲೆ ತಿಳಿಸಿದರು.
ಮನೆಯಂದ ಮೇಲೆ ಕೆಲವು ಜಗಳಗಳು ಇರುತ್ತವೆ, ಸ್ವಲ್ಪ ಕಿರಿಕಿರಿ ಇರುತ್ತೇ, ಮತ್ತೆ ಸಾಲ್ವು ಆಗುತ್ತವೆ. ಯಾರೋ ಏನು ಹೇಳಿದ್ರು ಅಂತಾ ಗಾಬರಿ ಪಡಬೇಕಾಗಿಲ್ಲ ಎಂದವರುಹೇಳಿದರು.
ಸಹಿ ಸಂಗ್ರಹ ವಿದ್ಯಮಾನ ಕುರಿತಂತೆ ಪ್ರತಿಕ್ರಿಯಿಸಿದ ಅವರು, ನಾನು ಯಾವುದಕ್ಕೂ ಸಹಿ ಮಾಡಿಲ್ಲ, ಸಹಿ ಸಂಗ್ರಹಣೆ ನಡೆಯುತ್ತಿರುವ ಕುರಿತು ಮಾಹಿತಿ ಇಲ್ಲ ಎಂದರು. ಹೈಕಮಾಂಡ್ ಎಲ್ಲದನ್ನೂ ನೋಡುತ್ತಿದೆ ಎಂದ ಅವರು,ಕೋವಿಡ್ ಸಂದರ್ಭದಲ್ಲಿ ಸಿಎಂ ಅವರಿಗೆ ಬೇಜಾರ ಆಗಿರಬಹುದು. ಹಾಗಾಗಿ ರಾಜೀನಾಮೆ ನೀಡಲು ಸಿದ್ದ ಅಂತಾ ಹೇಳಿದ್ದಾರೆ ಎಂದು ಸಚಿವೆ ಪ್ರತಿಕ್ರಿಯಿಸಿದರು.