ಉಡುಪಿ: ಬಿಜೆಪಿಗೆ ಯಾರೇ ಬಂದರೂ ಸ್ವಗತವಿದೆ ಎಂದು ಸಚಿವ ಮಾಧುಸ್ವಾಮಿ ಆಹ್ವಾನ ನೀಡಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಾದರೂ ಬರುವುದಿದ್ದರೆ ಬರ್ರಿ. ಬೇರೆ ಪಕ್ಷದಿಂದ ಬಿಜೆಪಿಗೆ ಬರುವುದಾದರೆ ಸ್ವಾಗತ ವಿದೆ ಎಂದರು. ವಿಸ್ತರಣೆಯು ರಾಜಕೀಯ ಎಲ್ಲಾ ಪಕ್ಷಗಳ ಉದ್ದೇಶ ಆಗಿರುತ್ತದೆ. ಕಾಂಗ್ರೆಸ್ ನಿಂದ ಯಾರಾದರೂ ಬರುವವರಿದ್ದರೂ ನಾವು ಸ್ವಾಗತಿಸುತ್ತೇವೆ ಎಂದವರು ತಿಳಿಸಿದರು.
ವ್ಯಾಕ್ಸಿನ್ ಭೋಗಸ್ ಎಂದಿರುವ ಡಿ.ಕೆ ಶಿವಕುಮಾರ್ ಡಿಕೆಶಿ ಆರೋಪಕ್ಕೂ ಸಚಿವ ಮಾದುಸ್ವಾಮಿ ತಿರುಗೇಟು ನೀಡಿದರು. ವ್ಯಾಕ್ಸಿನ್ ವಿಚಾರದಲ್ಲಿ ಮೋದಿಯನ್ನ ಟೀಕೆ ಮಾಡಿದರೆ ನಿಮಗೆ ಒಳ್ಳೇದಾಗಲ್ಲ. ದೇಶದಲ್ಲಿ 80 ಕೋಟಿ ಜನಕ್ಕೆ ಉಚಿತ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದರು.
ರಾಜ್ಯ ಸರ್ಕಾರ 2000 ಕೋಟಿ ರುಪಾಯಿ ತೆಗೆದಿಟ್ಟಿದೆ. ಡಿಕೆಶಿಯ ಪಾಪದ ಮಾತಿನಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ ಎಂದ ಅವರು, ಟೀಕೆ ಮಾಡುವುದನ್ನು ಮಾಡಿ. ಅದು ನಿಮ್ಮ ಡ್ಯೂಟಿ ಎಂದರು.
ನೈಸರ್ಗಿಕ ಆಪತ್ತಿನ ಕಾಲದಲ್ಲಿ ಎಲ್ಲವನ್ನು ಟೀಕೆ ಮಾಡಬಾರದು. ವ್ಯಾಕ್ಸಿನ್ ಉತ್ಪಾದನೆ ಮಾಡಲು ಕಂಪನಿಯವರಿಗೂ ಕಾಲಾವಕಾಶ ಬೇಕು. ಮುಂದಿನ ಮೂರು ತಿಂಗಳಲ್ಲಿ ರಾಜ್ಯದಲ್ಲಿ ಲಸಿಕೆ ಅಭಿಯಾನ ಮುಗಿಯುತ್ತದೆ ಎಂದ ಮಾಧುಸ್ವಾಮಿ, ಇದು ಡಿಕೆಶಿ ಅವರ ಬದುಕಿನ ಪ್ರಶ್ನೆ. ಹೀಗಾಗಿ ವಿರೋಧ ಮಾಡುತ್ತಾರೆ ಎಂದು ಎದಿರೇಟು ನೀಡಿದರು.