ಮೈಸೂರು: ಉಗ್ರ ಸಂಘಟನೆ ಆಲ್ಖೈದಾ ವಿಡಿಯೋ ತುಣುಕಿನ ನಿಖರತೆ ಬಗ್ಗೆ ಪರಿಶೀಲಿಸಲು ಪೊಲೀಸರಿಗೆ ಸಿಎಂ ಸೂಚನೆ ನೀಡಿದ್ದಾರೆ.
ಈ ಕುರಿತಂತೆ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊಂಡ ಅವರು, ವಿಡಿಯೋ ತುಣುಕಿನ ನಿಖರತೆ ಬಗ್ಗೆ ಪರಿಶೀಲಿಸಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಹಿಜಾಬ್ ಪ್ರಕರಣ ಬಗ್ಗೆ ದೇಶ, ರಾಜ್ಯದ ಕಾನೂನಿನ ವಿರುದ್ಧ ಅನಾವಶ್ಯಕವಾಗಿ ಹಲವಾರು ವಿಷಯಗಳನ್ನು ಪ್ರಾರಂಭ ಮಾಡಿ ಜನರಲ್ಲಿ ಆಶಾಂತಿ ಗೊಂದಲವನ್ನು ಮೂಡಿಸುವ ಶಕ್ತಿಯ ಹಿಂದಿನಿಂದಲೂ ಕೆಲಸ ಮಾಡುತ್ತಾ ಬಂದಿದೆ. ಅದರ ಭಾಗವಾಗಿ ಅಲ್ ಖೈದಾ ದಿಂದ ಎಂದು ಹೇಳಿಕೊಂಡಿರುವ ವಿಡಿಯೋ ತುಣುಕಿನಲ್ಲಿ ಅವರ ಅಭಿಪ್ರಾಯವನ್ನು ಸ್ಪಷ್ಟವಾಗಿ ವ್ಯಕ್ತಿಪಡಿಸಿದ್ದಾರೆ ಎಂದರು.
ಅಲ್ ಖೈದಾ ಹೇಳಿಕೆ ಹಿಂದೆ ಆರ್ ಎಸ್ ಎಸ್ ನ ಕೈವಾಡವಿದೆ ಎಂದು ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಹೇಳಿರುವ ಬಗ್ಗೆ ಪ್ರತಿಕ್ರಯಿಸಿ , ಅವರ ಮಾತಿಗೆ ಯಾವುದೇ ತರ್ಕ ಹಾಗೂ ಆಧಾರ ಇಲ್ಲ. ಅಲ್ ಖೈದಾ ಹೇಳಿಕೆ ಬಹಿರಂಗವಾದರೆ ಸಿದ್ಧರಾಮಯ್ಯ ಅವರು ಗಲಿಬಿಲಿ ಆಗುತ್ತಿರುವುದೇಕೆ ಎನ್ನುವ ಮೂಲಭೂತ ಪ್ರಶ್ನೆ ಉದ್ಭವಿಸುತ್ತಿದೆ ಎಂದರು.






















































