ಬೆಂಗಳೂರು: ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ, ರಾಜ್ಯ ಬಿಜೆಪಿ ಸರಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ವ್ಯಾಖ್ಯಾನಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು, ʼಸಾವುಗಳನ್ನೇ ಸಾಧನೆʼಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರಕಾರ ಮುಖ ಉಳಿಸಿಕೊಂಡಿದೆ ಎಂದಿದ್ದಾರೆ.
ಸರಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ʼಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರಕಾರದ ವರ್ಷದ ಸಾಧನೆ!! 2/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 28, 2022
ಸರಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ʼಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರಕಾರದ ವರ್ಷದ ಸಾಧನೆ ಎಂದು ವ್ಯಂಗ್ಯವಾಡಿದ್ದಾರೆ.
ಜಾತಿ, ಧರ್ಮ, ಆಚಾರ, ವಿಚಾರ, ಆಹಾರ, ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ? ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ʼಮತಕ್ಕಾಗಿ ಕೋಮು ಗಳʼ ಇರಿಯುವುದಾ ಸಾಧನೆ?
ಸಾಧನೆ ನೆಪದಲ್ಲಿ ನಲಿಯುವ ಮುನ್ನ ಕನಿಷ್ಠ ನಾಚುವ ಸೂಕ್ಷ್ಮತೆಯೂ ಇಲ್ಲವಲ್ಲ..3/8— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 28, 2022
ಜಾತಿ, ಧರ್ಮ, ಆಚಾರ, ವಿಚಾರ, ಆಹಾರ, ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ? ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ʼಮತಕ್ಕಾಗಿ ಕೋಮು ಗಳʼ ಇರಿಯುವುದಾ ಸಾಧನೆ? ಎಂದು ಪ್ರಶ್ನಿಸಿರುವ ಹೆಚ್ಡಿಕೆ,ಸಾಧನೆ ನೆಪದಲ್ಲಿ ನಲಿಯುವ ಮುನ್ನ ಕನಿಷ್ಠ ನಾಚುವ ಸೂಕ್ಷ್ಮತೆಯೂ ಇಲ್ಲವಲ್ಲ ಎಂದಿದ್ದಾರೆ.
ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ಕೊಲೆಯನ್ನೇ ತಡೆಯಲಾಗದೇ ಈಗ ʼಕೃತಕ ಸಾಂತ್ವನʼ ಹೇಳಿದರೇನು ಪ್ರಯೋಜನ? 4/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 28, 2022
ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ಕೊಲೆಯನ್ನೇ ತಡೆಯಲಾಗದೇ ಈಗ ʼಕೃತಕ ಸಾಂತ್ವನʼ ಹೇಳಿದರೇನು ಪ್ರಯೋಜನ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ತಾಯಿಂದಿರ ಆರ್ತನಾದ ಸರಕಾರದ ಕಿವಿಗೆ ಇಂಪಾದ ʼನಾದʼದಂತೆ ಕೇಳುತ್ತಿವೆಯಾ? ಬಿಜೆಪಿಯ ʼಮತಕ್ಕಾಗಿ ಮರಣಮೃದಂಗʼದ ಆಳ-ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ. ಬಿಜೆಪಿ ಅಧ್ಯಕ್ಷರು ಸೇರಿ ಸಚಿವರಿಬ್ಬರಿಗೆ ಎದುರಾದ ಪ್ರತಿರೋಧವೇ ಜನರ ತಾಳ್ಮೆ ಕಟ್ಟೆಯೊಡೆದಿದೆ ಎನ್ನುವುದಕ್ಕೆ ಸಾಕ್ಷಿ. ಕರಾವಳಿ ಕೆರಳಿದೆ. ಕರ್ನಾಟಕ ಕೆರಳುವುದು ಬಾಕಿ ಇದೆ ಎಂದಿದ್ದಾರೆ.
ಏನು ಸಾಧನೆ ಅಂತ ಸರಕಾರ ಜನರಿಗೆ ಹೇಳುತ್ತದೆ?
*40% ಕಮಿಷನ್
*ಕೋವಿಡ್ ಹೆಸರಿನಲ್ಲಿ ಕೊಳ್ಳೆ
*ಅಧಿಕಾರಿಗಳ ವರ್ಗದಲ್ಲಿ ಪೇಮೆಂಟ್ ಕೋಟಾ
*ಪಿಎಸ್ಐ ನೇಮಕದಲ್ಲಿ ಕಾಸಿನಾಟ
*ಸಹಾಯಕ ಪ್ರಾಧ್ಯಾಕರ ನೇಮಕದಲ್ಲೂ ನೋಟಿನಾಟಜೇಬು ತುಂಬಿಸಿಕೊಳ್ಳುವ ಧನದಾಟ ಬಿಟ್ಟರೆ, ಜನರಿಗೆ ಸರಕಾರ ಮಾಡಿದ್ದೇನು? 6/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 28, 2022
ಏನು ಸಾಧನೆ ಅಂತ ಸರಕಾರ ಜನರಿಗೆ ಹೇಳುತ್ತದೆ 40% ಕಮಿಷನ್, ಕೋವಿಡ್ ಹೆಸರಿನಲ್ಲಿ ಕೊಳ್ಳೆ, ಅಧಿಕಾರಿಗಳ ವರ್ಗದಲ್ಲಿ ಪೇಮೆಂಟ್ ಕೋಟಾ, ಪಿಎಸ್ಐ ನೇಮಕದಲ್ಲಿ ಕಾಸಿನಾಟ, ಸಹಾಯಕ ಪ್ರಾಧ್ಯಾಕರ ನೇಮಕದಲ್ಲೂ ನೋಟಿನಾಟ, ಜೇಬು ತುಂಬಿಸಿಕೊಳ್ಳುವ ಧನದಾಟ ಬಿಟ್ಟರೆ, ಜನರಿಗೆ ಸರಕಾರ ಮಾಡಿದ್ದೇನು? ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.
ನಡುರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರಕಾರ ಬದುಕಿದೆಯಾ? ಸತ್ತಿದೆಯಾ? 7/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 28, 2022
ನಡುರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರಕಾರ ಬದುಕಿದೆಯಾ? ಸತ್ತಿದೆಯಾ? ಎಂದು ಸರಣಿ ಪ್ರಶ್ನೆಗಳನ್ನು ಹರಿಯಬಿಟ್ಟಿರುವ ಅವರು, ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ.. ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ ಎಂದಿದ್ದಾರೆ.































































