ಬೆಂಗಳೂರು: ವರ್ಷಕಾಲ ನಡೆದ ದೆಹಲಿ ರೈತ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ 750 ರೈತರಿಗೆ ನಮನ ಸಲ್ಲಿಸಲು ಡಿಸೆಂಬರ್ 11 ಅನ್ನು ದೇಶಾದ್ಯಂತ ರೈತ ಹುತಾತ್ಮ ದಿನವನ್ನಾಗಿ ಆಚರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಕಬ್ಬು ಬೆಳೆಗಾರರ ಅಹೋರಾತ್ರಿ ಸತ್ಯಾಗ್ರಹದಲ್ಲೂ ಹುತಾತ್ಮ ದಿನವನ್ನು ಆಚರಿಸಲಾಯಿತು.
ರೈತರಿಗೆ ಮಾರಕವಾದ 3 ಕೃಷಿ ಕಾಯ್ದೆಗಳನ್ನ ಕೇಂದ್ರ ಸರ್ಕಾರ ಹಿಂಪಡೆದ ನಂತರ ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯಲ್ಲಿ ನಡೆದ ರೈತ ಆಂದೋಲನ ಪೂರ್ಣಗೊಳಿಸಿದ ದಿನ ಇಂದು. ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯು ಇಂದು ದೇಶಾದ್ಯಂತ ರೈತ ಹುತಾತ್ಮ ದಿನವಾಗಿ ಆಚರಿಸಲಾಗುತ್ತಿದೆ. ದಕ್ಷಿಣ ಭಾರತ ರಾಜ್ಯಗಳ ರೈತ ಮುಖಂಡರು ಫ್ರೀಡಂ ಪಾರ್ಕ್ ನಲ್ಲಿ ಕಣ್ಣಿಗೆ ಕಪ್ಪು ಪಟ್ಟಿ ಧರಿಸಿ, ಮೇಣದ ಬತ್ತಿ ಬೆಳಗಿಸಿ, ಪ್ರಾಣತ್ಯಾಗ ಮಾಡಿದ ರೈತರಿಗೆ ನಮನ ಸಲ್ಲಿಸಿದರು,
ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ಸಂಚಾಲಕ ಕೆ ವಿ ಬಿಜು ಮಾತನಾಡಿ ಕೇಂದ್ರ ಸರ್ಕಾರವು ಹೋರಾಟದಲ್ಲಿ ಮಡಿದ ರೈತರಿಗೆ 5 ಲಕ್ಷ ರೂಪಾಯಿ ಪರಿಹಾರ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಇನ್ನೂ ಕೂಡ ಸಾವನಪ್ಪಿದ ಕುಟುಂಬಗಳ ರಕ್ಷಣೆ ಮಾಡಿಲ್ಲ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಶಾಸನ ರೂಪಿಸುತ್ತೇವೆ ಎಂದು ಹೇಳಿ, ಇನ್ನು ಜಾರಿ ಮಾಡಿಲ್ಲ, ರೈತರ ವಂಚಿಸುವ ಕೆಲಸ ಆಗಬಾರದು, ಎಂದರು
ತೆಲಂಗಾಣ ರಾಜ್ಯದ ರೈತ ಮುಖಂಡ ವೆಂಕಟೇಶ್ವರ ರಾವ್ ಮಾತನಾಡಿ, ದೆಹಲಿ ರೈತ ಹೋರಾಟದಲ್ಲಿ ಮಡಿದ 750 ರೈತ ಕುಟುಂಬಗಳಿಗೆ ತೆಲಂಗಾಣ ಸರ್ಕಾರದ ಮುಖ್ಯಮಂತ್ರಿ ಕೆಸಿಆರ್ ರವರು ಪ್ರತಿ ಕುಟುಂಬಕ್ಕೆ ಮೂರು ಲಕ್ಷದಂತೆ ಪರಿಹಾರ ನೀಡಿದ್ದಾರೆ, ಕೇಂದ್ರ ಸರ್ಕಾರಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ, ಎಂದು ಪ್ರಶ್ನೆ ಮಾಡಿದರು, ಕೇಂದ್ರ ಸರ್ಕಾರ ಬಂಡವಾಳ ಶಾಹಿಗಳ ಕಾರ್ಪೊರೇಟ್ ಸಂಸ್ಥೆಗಳ ಹಿತರಕ್ಷಣೆಗೆ ಹೆಚ್ಚು ಹೊತ್ತು ನೀಡುವುದು ಒಳ್ಳೆ ಬೆಳವಣಿಗೆ ಅಲ್ಲ, ದೇಶದ ರೈತರು ಬೆಳೆದ ಉತ್ಪನ್ನಗಳನ್ನು ಶ್ರೀಲಂಕಾ ಬಾಂಗ್ಲಾ ದೇಶಗಳಿಗೆ ದಾನ ಮಾಡುವ ನಮ್ಮ ಪ್ರಧಾನಿಗೆ ನಮ್ಮ ರೈತರ ಸಾವು ಕಾಣುತ್ತಿಲ್ಲವೇ ಎಂದು ಪ್ರಶ್ನೆ ಮಾಡಿದರು, ತೆಲಂಗಾಣ ರಾಜ್ಯದಲ್ಲಿ ಶೇಕಡ 9 ಸಕ್ಕರೆ ಇಳುವರಿ ಬರುವ ಕಬ್ಬಿಗೆ 3200 ನಿಗದಿ ಮಾಡಿದ್ದಾರೆ ಕರ್ನಾಟಕ ಏಕೆ ಹೆಚ್ಚುವರಿ ನಿಗದಿ ಮಾಡಲು ಸಾಧ್ಯವಿಲ್ಲ ತೆಲಂಗಾಣದಲ್ಲಿ ಸರ್ಕರ ರೈತರಿಗೆ ಗೂಬ್ಬರ ಬೀಜ ಖರೀದಿಗೆ ಎಕರೆಗೆ 10ಸಾವಿರ ನಿಡುತಾರೆ ಇದೆ ರೀತಿ ದೇಶದ ಎಲ್ಲ ಭಾಗದಲ್ಲಿ ಇದೆ ರೀತಿ ಯಾಗಭೇಕು ರೈತರು ಸಂಘಟಿತರಾಗಿ ಹೋರಾಟ ಮುಂದುವರಿಸಿ ದೇಶದ ರೈತರೆಲ್ಲ ನಿಮ್ಮ ಜೊತೆಯಲ್ಲಿದ್ದೇವೆ ಎಂದರು.
ರಾಜ್ಯ ರೈತ ಸಂಘಟನೆಗಳು ಒಕ್ಕೂಟ ಹಾಗೂ ಸಂಯುಕ್ತ ಕಿಸಾನ್ ಮೋರ್ಚ ದಕ್ಷಿಣ ಭಾರತ ರಾಜ್ಯಗಳ ಮುಖ್ಯಸ್ಥ ಕುರುಬೂರ್ ಶಾಂತಕುಮಾರ್ ಮಾತನಾಡಿ, ಕಾರ್ಪೊರೇಟ್ ಕಂಪನಿಗಳಿಗೆ ಬಂಡವಾಳಶಾಹಿಗಳಿಗೆ 10 ಲಕ್ಷ ಕೋಟಿ ಸಾಲ ಮನ್ನ ಮಾಡುವ ಕೇಂದ್ರ ಸರ್ಕಾರಕ್ಕೆ ರೈತರ ಸಾಲ ಮನ್ನಾ ಮಾಡಲು ಯಾಕೆ ಸಾಧ್ಯವಾಗುತ್ತಿಲ್ಲ ಎಂದರು,
ಸುಳ್ಳು ಭರವಸೆಗಳನ್ನು ನೀಡುತ್ತಲೇ ಕಾಲ ಕಳೆದು ರೈತರನ್ನು ದಿಕ್ಕು ತಪ್ಪಿಸುವ ಕಾರ್ಯ ಮಾಡಬೇಡಿ, ಡಬಲ್ ಇಂಜಿನ ಸರ್ಕಾರ ಡಬಲ್ ಗೇಮ್ ಆಡಬಾರದು, ಪ್ರಕೃತಿ ಮುನಿಸು ಈ ವರ್ಷ ಅತಿವೃಷ್ಟಿ ಮಳೆ ಹಾನಿಯಿಂದ ಆಹಾರ ಉತ್ಪಾದನೆ ಕಡಿಮೆಯಾಗುತ್ತಿದೆ, ಗ್ರಾಹಕರು ಆಹಾರಕ್ಕಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗುತ್ತದೆ , ಆಗಲಾದರೂ ರೈತರ ಶಕ್ತಿ ತಿಳಿಯುತ್ತದೆ ಎಂದರು.
ಕಬ್ಬು ಬೆಳೆಗಾರರ ಆಹೋ ರಾತ್ರಿ ಧರಣಿಯ 20ನೆ ದಿನದ ಹೋರಾಟದಲ್ಲಿ, ಉತ್ತರಕನ್ನಡ ಜಿಲ್ಲೆಯ ರೈತ ಮುಖಂಡರಾದ ಕುಮಾರ ಬೂಬಾಟಿ, ರಾಜ್ಯ ರೈತಸಂಘದ ಅಧ್ಯಕ್ಷ ನಾರಾಯಣರೆಡ್ಡಿ, ಪಿ ಸೂಮಶೇಖರ್, ಬರಡನಪುರ ನಾಗರಾಜ್, ಅತ್ತಹಳ್ಳಿ ದೇವರಾಜ್, ಕಿರಗಸೂರ ಶಂಕರ, ಗುರುಸಿದ್ದಪ್ಪಕೂಟಗಿ ಮೊದಲಾದವರು ಭಾಗಿಯಾಗಿದ್ದರು.


























































