ದೆಹಲಿ: ಮಹದಾಯಿ ವಿವಾದ ಕುರಿತಂತೆ ಗೋವಾ ಸರ್ಕಾರ ಕರ್ನಾಟಕ ವಿರುದ್ದ ದೆಹಲಿಯಲ್ಲಿ ರಣತಂತ್ರ ರೂಪಿಸುತ್ತಿದೆ. ಗುರುವಾರ ಗೋವಾ ಸಿಎಂ ನೇತೃತ್ವದ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಅಹವಾಲು ಸಲ್ಲಿಸಿದೆ.
ಮಹದಾಯಿ ನದಿ ನೀರು ತಿರುವು ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಶೀಘ್ರ ನೀರು ನಿರ್ವಹಣೆ ಪ್ರಾಧಿಕಾರ ರಚಿಸಬೇಕೆಂದು ಆಗ್ರಹಿಸಿ ಗೋವಾ ಸಿಎಂ ಪ್ರಮೋದ್ ಸಾವಂತ್ ನೇತೃತ್ವದ ಈ ನಿಯೋಗ ಅಮಿತ್ ಶಾ ಅವರನ್ನು ಮನವಿ ಮಾಡಿತು. ಕೇಂದ್ರ ಪ್ರವಾಸೋದ್ಯಮ ಸಹಾಯಕ ಸಚಿವ ಶ್ರೀಪಾದ್ ನಾಯಕ್, ಗೋವಾ ವಿಧಾನಸಭೆ ಸ್ಪೀಕರ್ ರಮೇಶ್ ತಾವಡ್ಕರ್, ಜಲ ಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್, ಪರಿಸರ ಖಾತೆ ಸಚಿವ ನೀಲೇಶ್ ಕಬ್ರಲ್, ಸಾರಿಗೆ ಸಚಿವ ಮೌವಿನ್ ಗೊಡಿನ್ಹೊ, ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ಇಂಧನ ಸಚಿವ ರಾಮಕೃಷ್ಣ ದಾವಲಿಕರ್ ಮತ್ತು ಶಾಸಕ ಚಂದ್ರಕಾಂತ್ ಶೆಣೈ ಮೊದಲಾದ ಪ್ರಮುಖರು ಈ ನಿಯೋಗದಲ್ಲಿದ್ದರು.
Goa Government's delegation on Mhadei met the Hon'ble Home Minister, Shri @AmitShah Ji in New Delhi today and urged for immediate constitution of the Mhadei Water Management Authority as given in the award and also urged for the withdrawal of the DPR sanctioned by CWC. pic.twitter.com/A6QEKdT3De
— Dr. Pramod Sawant (Modi Ka Parivar) (@DrPramodPSawant) January 11, 2023
ಮಹದಾಯಿಯ ಉಪನದಿಗಳಾದ ಕಳಾಸ ಮತ್ತು ಬಂಡೂರಿಗೆ ಅಡ್ಡಲಾಗಿ ಎರಡು ಅಣೆಕಟ್ಟೆಗಳ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ವಿವರವಾದ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿರುವುದಕ್ಕೆ ಗೋವಾ ರಾಜ್ಯದ ನಾಯಕರ ನಿಯೋಗ ಆಕ್ಷೇಪ ವ್ಯಕ್ತಪಡಿಸಿತು. ಮಹಾದಾಯಿ ನದಿ ತಿರುವು ಯೋಜನೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿತು.
























































