ಹುಬ್ಬಳ್ಳಿಯಲ್ಲಿಂದು ಕೆಎಲ್ಇ ತಾಂತ್ರಿಕ ವಿವಿಯ ಬಿವಿಬಿ ಕಾಲೇಜಿನ 75 ನೇ ಅಮೃತ ಮಹೋತ್ಸವ ಸಮಾರಂಭ ನೆರವೇರಿತು. ಈ ಸಂದರ್ಭದಲ್ಲಿ ಒಳಾಂಗಣ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮ ಗಮನಸೆಳೆಯಿತು. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಗದೀಶ್ ಶೆಟ್ಟರ್, ರಾಜ್ಯದ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ, ಬ್ರಹ್ಮಶ್ರೀ ಗುರುದೇವ ಶ್ರೀ ಸಹಿತ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗಿಯಾದರು.
© 2020 Udaya News – Powered by RajasDigital.