ಬೆಂಗಳೂರು: ಯಕ್ಷಗಾನ ಕಲೆಯ ಪ್ರಮುಖ ಕೊಂಡಿಯೊಂದು ಕಳಚಿದೆ. ಬಲಿಪ ಪರಂಪರೆಯ ಕೊಂಡಿ, ಅಸಾಧಾರಣ ಪ್ರತಿಭಾವಂತರಾಗಿದ್ದರೂ ಸರಳತೆಯ ಸಾಕಾರವಾಗಿದ್ದ ಬಲಿಪ ನಾರಾಯಣ ಭಾಗವತರು ವಿಧಿವಶರಾಗಿದ್ದಾರೆ.
ಬಲಿಪ ಪ್ರಸಾದ ಭಾಗವತರ ಅಕಾಲಿಕ ನಿಧನ ಆಘಾತ ತಂದಿದೆ. ಬಲಿಪ ಭಾಗವತರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.
ಯಕ್ಷಗಾನದ ತವರು ಕರಾವಳಿಯ ಸಂಸದರೂ ಆದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರು ಬಲಿಪ ಭಾಗವತರ ನಿಧನ ಬಗ್ಗೆ ಅತೀವ ದುಃಖ ವ್ಯಕ್ತಪಡಿಸಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಕುಟುಂಬಕ್ಕೆ, ಹಿತೈಷಿಗಳಿಗೆ, ಅಸಂಖ್ಯಾತ ಅಭಿಮಾನಿಗಳಿಗೆ ಈ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ನಳಿನ್ ಕುಮಾರ್ ಕಟೀಲ್ ಪ್ರಾರ್ಥಿಸಿದ್ದಾರೆ.
ಯಕ್ಷರಂಗದ ಭೀಷ್ಮರೆಂದೇ ಖ್ಯಾತರಾದ ಶ್ರೀ ಬಲಿಪ ನಾರಾಯಣ ಭಾಗವತರು ನಿಧನ ಹೊಂದಿದ ಸುದ್ದಿ ಬಹಳ ದುಃಖ ತಂದಿದೆ.
ಶ್ರೀಯುತರ ದಿವ್ಯಾತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/1d6N0q7cHi— Nalinkumar Kateel (@nalinkateel) February 16, 2023
ಯಕ್ಷರಂಗದ ಭೀಷ್ಮ, ಅದ್ಭುತ ಕಂಠ ಸಿರಿಯ ತೆಂಕು ತಿಟ್ಟಿನ ಯಕ್ಷಗಾನ ಲೋಕದ ಹಿರಿಯ ಕಲಾವಿದ ಬಲಿಪ ನಾರಾಯಣ ಭಾಗವತರು ವಿಧಿವಶರಾಗಿರುವ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೂ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
ಯಕ್ಷರಂಗದ ಭೀಷ್ಮ, ಅದ್ಭುತ ಕಂಠ ಸಿರಿಯ ತೆಂಕು ತಿಟ್ಟಿನ ಯಕ್ಷಗಾನ ಲೋಕದ ಹಿರಿಯ ಕಲಾವಿದ ಶ್ರೀ ಬಲಿಪ ನಾರಾಯಣ ಭಾಗವತರು ವಿಧಿವಶ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ.
ಓಂ ಶಾಂತಿ. pic.twitter.com/gO8elJnV5t
— Shobha Karandlaje (Modi Ka Parivar) (@ShobhaBJP) February 16, 2023