ಬೆಂಗಳೂರು: ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಶನಿವಾರ ಮುಖ್ಯಮಂತ್ರಿಗಳ ಬಗ್ಗೆ ಮಾತನಾಡುತ್ತಾ ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರ ಮಾಡಿರುತ್ತಾರೆ ಎಂದು ಜಾತಿಯನ್ನು ಉಲ್ಲೇಖಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾಹುಲ್ ಗಾಂಧಿ ಅವರ ರೀತಿಯಲ್ಲೇ ನಿರ್ದಿಷ್ಟ ಸಮುದಾಯದ ಅವಹೇಳನ ಮಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಲಿಂಗಾಯತ ಸಮುದಾಯದ ಪ್ರಮುಖರು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದ್ದಾರೆ.
ಲಿಂಗಾಯತ ಸಮುದಾಯದ ವಕೀಲ ಬಸವರಾಜ ಹಳ್ಳದ್ ಹಾಗೂ ಇತರರು ಸಿದ್ದರಾಮಯ್ಯನವರ ವಿರುದ್ಧ ಇಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.





















































