ಬೆಂಗಳೂರು: ಬಿಜೆಪಿ ಹಿರಿಯ ನಾಯಕರು ಬೆಲೆ ಏರಿಕೆ, ಮಹಿಳೆಯರ ಮೇಲಿನ ದೌರ್ಜನ್ಯ, ನಿರುದ್ಯೋಗ ಹಾಗೂ ಇತರೆ ಗಂಭೀರ ಚುನಾವಣೆಯ ವಿಚಾರಗಳನ್ನು ಭಾವನಾತ್ಮಕ ವಿಚಾರಗಳ ಮೂಲಕ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡಲಾಗುತ್ತಿದ್ದಾರೆ ಎಂದು ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪವನ್ ಖೇರಾ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬಿಜೆಪಿಯವರ ವಿಚಾರಗಳು ಜನರ ದಿನನಿತ್ಯದ ಬದುಕಿಗೆ ಸಂಬಂಧವೇ ಇರುವುದಿಲ್ಲ ಎಂದು ಟೀಕಿಸಿದ್ದಾರೆ.
2014ರವರೆಗೂ ಅಡುಗೆ ಅನಿಲಕ್ಕೆ 410 ರೂ ನೀಡುತ್ತಿದ್ದ ಜನರು ತಮ್ಮ ಆದಾಯ ಏರಿಕೆಯಾಗದೇ ಈಗ ಅದೇ ಅಡುಗೆ ಅನಿಲಕ್ಕೆ 1100 ರೂ. ಆಗಿದೆ. 2014ರಲ್ಲಿ 70 ರೂ.ಗೆ ಒಂದು ಲೀಟರ್ ಪೆಟ್ರೋಲ್ ಸಿಗುತ್ತಿತ್ತು. ಆದರೆ ಕಚ್ಚಾತೈಲಬೆಲೆ ಕುಸಿದಿದ್ದರೂ ಇಂದು ಒಂದು ಲೀಟರ್ ಪೆಟ್ರೋಲ್ ಗೆ 101 ರೂ. ನೀಡಬೇಕಾಗಿದೆ. ಇದು ಚುನಾವಣೆಯ ಗಂಭೀರವಾಗಿದೆ. ಮನೆ ನಿರ್ಮಾಣದ ವಸ್ತುಗಳಾದ ಸೀಮೆಂಟ್ 230ರೂ.ನಿಂದ 430 ರೂ.ಆಗಿದೆ. ಕಬ್ಬಿಣ 51,438 ರೂ. ಗೆ ಮೆಟ್ರಿಕ್ಟ್ ಟನ್ ಸಿಗುತ್ತಿತ್ತು. ಈಗ 82,500 ರೂ. ಆಗಿದೆ. ಅಗತ್ಯ ವಸ್ತುಗಳ ಬೆಲೆ ವಿಪರೀತವಾಗಿ ಏರಿಕೆಯಾಗಿದೆ. ಈ ವಿಚಾರಗಳ ಬಗ್ಗೆ ಸರ್ಕಾರ ಚರ್ಚೆ ಮಾಡಲು ಸಿದ್ಧವಿಲ್ಲ. ಈ ಬಗ್ಗೆ ಚರ್ಚೆ ಮಾಡಿದರೆ ಸರ್ಕಾರದ ಬಂಡವಾಳ ಭಯವಾಗುತ್ತದೆ. ಹೀಗಾಗಿ ಅವರು ಸದಾ ಸಮಾಜ ಒಡೆದು ನಮ್ಮ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದವರು ಹೇಳಿದ್ದಾರೆ.
ದೇಶದಲ್ಲಿ ಗೌರವಯುತವಾಗಿ ಬದುಕಲು ಈ ಬೆಲೆ ಏರಿಕೆ ಅವಕಾಶ ನೀಡುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಬೆಲೆ ಏರಿಕೆ ವಿಚಾರವನ್ನು ಬಹಳ ಗಂಭೀರವಾಗಿ ಚರ್ಚೆ ಮಾಡುತ್ತಿದೆ. ನಮಗೆ ಯಾವುದಾದಗೂ ಕಾಯಿಲೆ ಬಂದೆರೆ ಅದಕ್ಕೆ ಚಿಕಿತ್ಸೆ ನೀಡಬೇಕೆ ಹೋರತು, ಬೇರೆಯವರನ್ನು ದೂಷಿಸುತ್ತಿದ್ದರೆ ಪ್ರಯೋಜನವಾಗುವುದಿಲ್ಲ. ಹೀಗಾಗಿ ಸರ್ಕಾರ ಜನರ ಸಮಸ್ಯೆಗಳ ವಿಚಾರದಲ್ಲಿ ಪರಿಹಾರ ನೀಡುವುದರ ಬದಲು ಸಮಾಜ ಒಡೆದು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದ ಅವರು, ಕಾಂಗ್ರೆಸ್ ಪಕ್ಷ ಈ ಬೆಲೆ ಏರಿಕೆ ಸಮಸ್ಯೆಗೆ ಪರಿಹಾರವಾಗಿ ಜನಸಾಮಾನ್ಯರಿಗೆ 5 ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ. ಇದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವ್ಯತ್ಯಾಸ ಎಂದರು
*ರಮೇಶ್ ಬಾಬು:*
ನಿನ್ನೆ ಕೊರಟಗೆರೆಯಲ್ಲಿ ನಮ್ಮ ಮಾಜಿ ಉಪಮುಖ್ಯಮಂತ್ರಿ ಹಾಗೂ ಪಕ್ಷದ ಪ್ರಣಾಳಿಕೆ ಸಮಿತಿ ಮುಖ್ಯಸ್ಥ ಡಾ.ಜಿ. ಪರಮೇಶ್ವರ್ ಅವರ ಮೇಲೆ ಕಲ್ಲುತೂರಾಟ ಮಾಡಲಾಗಿದೆ. ಅವರು ನಾಮಪತ್ರ ಸಲ್ಲಿಸುವ ವೇಳೆಯೂ ಇದೇ ಪ್ರಯತ್ನ ನಡೆದಿದ್ದು, ಅಂದು ಅವರ ಬದಲಿಗೆ ಮಹಿಳಾ ಪೊಲೀಸ್ ಪೇದೆಗೆ ಕಲ್ಲು ತಾಗಿ ಗಾಯಗೊಂಡಿದ್ದರು. ಇದಕ್ಕೂ ಮುನ್ನ ವರುಣಾದಲ್ಲೂ ಇಂತಹ ಪ್ರಯತ್ನ ಮಾಡಲಾಗಿದೆ. ಇನ್ನು ಹೊಸಕೋಟೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಪತ್ನಿ ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಲಭೆಗಳಾಗುತ್ತವೆ ಎಂದು ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ದೂರು ದಾಖಲಿಸಿದೆ. ಅಮಿತ್ ಶಾ ಹೇಳಿಕೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ನಡೆಯುತ್ತಿರುವ ದಾಳಿಗಳ ಹಿಂದೆ ಬಿಜೆಪಿ ಷಡ್ಯಂತ್ರವಿದೆ. ಇದಕ್ಕೆ ಪೂರಕವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮ್ಮ ಪಕ್ಷದ ಪದಾಧಿಕಾರಿಗಳಿಗೆ ಪತ್ರ ಬರೆದು ನಿಮ್ಮ ಭಾಗದ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತಗಟ್ಟೆಗಳ ವಿವರ ಕೇಳಿದ್ದಾರೆ. ಇವೆಲ್ಲವನ್ನು ನೋಡಿದರೆ ಬಿಜೆಪಿ ಷಡ್ಯಂತ್ರ ಮಾಡಿ ರಾಜ್ಯ ಚುನಾವಣಾ ವಿಚಾರಗಳ ಗಮನ ಬೇರೆಡೆ ಸೆಳೆಯಲು ಚಿತಾವಣೆ ಮಾಡುತ್ತಿದ್ದಾರೆ. ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ನಾಯಕರು ರಾಜ್ಯ ಚುನಾವಣೆಯಲ್ಲಿ ಅಶಾಂತಿ ಮೂಡಿಸುವ ಕಾರ್ಯ ನೀಡಿದ್ದಾರೆ. ಈ ಸಂದರ್ಭದಲ್ಲಿ ನಾವು ಚುನಾವಣಾ ಆಯೋಗಕ್ಕೆ ಪ್ರಶ್ನೆ ಮಾಡುತ್ತೇವೆ. ರಾಜ್ಯದಲ್ಲಿ ಪಾರದರ್ಶಕ ಚುನಾವಣೆ ನಡೆಸಲು ಆಯೋಗ ವಿಫಲವಾಗಿದೆ. ರಾಜ್ಯ ಚುನಾವಣೆ ಮುಕ್ತವಾಗಿ ಭಯಮುಕ್ತವಾಗಿ ನಡೆಯಬೇಕು. ಈ ಷಡ್ಯಂತ್ರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು.






















































