ಮಂಗಳೂರು: ಹಿಂದುತ್ವದ ಪ್ರಯೋಗಶಾಲೆ ಎಂದೇ ಗುರುತಾಗಿರುವ ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನಲ್ಲೀಗ ‘ಹಿಂದೂತ್ವ Vs ನಳಿನ್ ಕುಮಾರ್’ ಕಾದಾಟ ಜೋರಾಗಿದೆ. ಹಿಂದೂ ಸಂಘಟನೆಯ ಮುಖಂಡ ಪುತ್ತಿಲ ಅರುಣ್ ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡದ ಕಾರಣ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ದ ಹಿಂದೂ ಸಂಘಟನೆಗಳು ಸಿಡಿದೆದ್ದಿವೆ. ಬಿಜೆಪಿಗೆ ಎದುರಾಳಿಯಾಗಿ ಸ್ವತಂತ್ರವಾಗಿ ಅಖಾಡಕ್ಕಿಳಿದ ಪುತ್ತಿಲ ಅವರು ಕೇಸರಿ ಶಕ್ತಿ ಪ್ರದರ್ಶನ ಮಾಡಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ಇಳಿಸಿ ಎದಿರೇಟು ಕೊಟ್ಟಿದ್ದರು.
ಇದೀಗ ಚುನಾವಣೆ ಮುಗಿದರೂ ಹಿಂದೂತ್ವ ಹಾಗೂ ನಳಿನ್ ನಡುವಿನ ಮುಸುಕಿನ ಗುದ್ದಾಟ ತೀವ್ರಗೊಂಡಿದೆ. ಪುತ್ತೂರಿನಲ್ಲಿ ಬಿಜೆಪಿ ಸೋಲಿಗೆ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಸದಾನಂದ ಗೌಡ ಕಾರಣ ಎಂದು ಆರೋಪಿಸಿ ಪುತ್ತೂರಿನಲ್ಲಿ ಈ ನಾಯಕರ ಬ್ಯಾನರ್ಗಳಿಗೆ ಚಪ್ಪಲಿ ಹಾರ ಹಾಕಲಾಗಿತ್ತು. ಸಂಸದರಿಗೆ ಅವಮಾನವಾಗಿದೆ ಎಂದು ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸರು ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ಚಿತ್ರಹಿಂಸೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಪುತ್ತೂರು ಬಸ್ ನಿಲ್ದಾಣ ದ ಬಳಿ ಅಳವಡಿಸಲಾದ ಬ್ಯಾನರ್..@BJP4Karnataka @nalinkateel @DVSadanandGowda @AsianetNewsSN @publictvnews @tv9kannada @VishweshwarBhat @mvmeet @astitvam pic.twitter.com/uoGiNJgX7x
— Sushanth Puttur🇮🇳 (@Sushanths95) May 15, 2023
ಈ ಕುರಿತ ಫೊಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಈ ಘಟನೆಯಿಂದ ರೊಚ್ಚಿಗೆದ್ದಿರುವ ನೆಟ್ಟಿಗರು ನಳಿನ್ ಕುಮಾರ್ ಕಟೀಲ್ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಈ ಒಟ್ಟಾರೆ ಬೆಳವಣಿಗೆಯು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಿರುದ್ದ ಅವರ ತವರಿನಲ್ಲೇ ಬಂಡಾಯದ ರಣಕಹಳೆ ಮೊಳಗಿರುವುದಕ್ಕೆ ಸಾಕ್ಷಿಯಾಗಿದೆ.
ಈ ನಡುವೆ, ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ.ಸದಾನಂಗೌಡರ ಭಾವಚಿತ್ರದ ಬ್ಯಾನರ್ಗೆ ಚಪ್ಪಲಿ ಹಾರ ಹಾಕಿದ ಆರೋಪದಲ್ಲಿ ಹಲವರನ್ನು ವಶಕ್ಕೆ ಪಡೆದಿದ್ದ ಪುತ್ತೂರು ಪೊಲೀಸರು ಚಿತ್ರಹಿಂಸೆ ನೀಡುದ್ದಾರೆನ್ನಲಾದ ಆರೋಪ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಪುತ್ತೂರು ನಲ್ಲಿ ಬಿಜೆಪಿ ಕಾರ್ಯಕರ್ತರ ಉಪಯೋಗ ಮಾಡಿ ಅಮಾನವೀಯ ಕೃತ್ಯ ಎಷ್ಟು ಸರಿ
ಯಾರು ಹೊಣೆ?#mpnalinkumarkateel?#ಬಿಜೆಪಿಯೇಭರವಸೆ#ಪುತ್ತೂರು@BJP4Karnataka pic.twitter.com/XcaD72oDVg— BRAHMOS (@BRAHMOS_007) May 17, 2023
ಪೊಲೀಸರು ಕ್ರೌರ್ಯ ನಡೆಸಿದ್ದಾರೆ ಎಂಬ ಆರೋಪ ಬಗ್ಗೆ ಪುತ್ತೂರು ಶಾಸಕ ಅಶೋಕ್ ರೈ ಅಸಮಾಧಾನ ಹೊರಹಾಕಿದ್ದಾರೆ. ಈ ದೌರ್ಜನ್ಯವನ್ನು ಅಶೋಕ್ ರೈ ಖಂಡಿಸಿದ್ದಾರೆ.
ಬಿಜೆಪಿ ನಾಯಕರ ಫೋಟೋವಿರುವ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯದ ಬಗೆಗಿನ ಘಟನೆಯ ಸತ್ಯಾಂಶದ ಬಗ್ಗೆ ಮಾಹಿತಿ ಪಡೆದುಕೊಂಡು, ಪ್ರಕರಣದಲ್ಲಿ ಪೊಲೀಸರು ಕಾನೂನು ಮೀರಿ ವರ್ತನೆ ತೋರಿದ್ದು ಕಂಡುಬಂದಲ್ಲಿ ಅಂತವರ ವಿರುದ್ಧ ಖಂಡಿತಾ ಕ್ರಮ ಕೈಗೊಳ್ಳಲಾಗುವುದು
ಅಶೋಕ್ ಕುಮಾರ್ ರೈ
ಶಾಸಕರು, ಪುತ್ತೂರು ಕ್ಷೇತ್ರ— Ashok Kumar Rai (@AshokRaiestate) May 17, 2023
ಈ ನಡುವೆ, ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರನ್ನು ಠಾಣೆಗೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದಾರೆಂಬ ಬಗ್ಗೆ ದೌರ್ಜನ್ಯಕ್ಕೊಳಗಾದವರ ದೂರಿನ ಆಧಾರದಲ್ಲಿ ಪುತ್ತೂರು ಡಿವೈಎಸ್ಪಿ , ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್ಐ ಮತ್ತು ಪುತ್ತೂರು ನಗರ ಪೋಲೀಸ್ ಠಾಣೆಯ ಸಿಬ್ಬಂದಿ ವಿರುದ್ಧ ದೂರು ದಾಖಲಾಗಿದೆ. ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್, ತಪ್ಪಿತಸ್ಥ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಶಾಂತಿ ಭಂಗಕ್ಕೆ ಯತ್ನಿಸುವವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆಯನ್ನೂ ಅಲೋಕ್ ನೀಡಿದ್ದಾರೆ
Appropriate action is being taken against the erring Police Officers & men in Puttur incident
Zero tolerance for such illegal and unwarranted actions
— alok kumar (@alokkumar6994) May 18, 2023
ಮತ್ತೊಂದೆಡೆ, ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಕೆಲವು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಹಿರಿಯ ಅಧಿಕಾರಿಗಳ ವಿರುದ್ದ ಕ್ರಮಕ್ಕಾಗಿ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ದಕ್ಷಿಣಕನ್ನಡ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ತಿಳಿಸಿದ್ದಾರೆ. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ಗಳನ್ನು ಹಾಕುವವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂಬ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.
ಹಿಂದೂ ಸಂಘಟನೆಗಳಿಗೆ ಯತ್ನಾಳ್ ಬೆಂಬಲ..!
ಈ ಮಧ್ಯೆ, ಹಿಂದೂ ಕಾರ್ಯಕರ್ತರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಘಟನೆಗೆ ನಳಿನ್ ಕುಮಾರ್ ಹೊಣೆ ಎಂಬ ಅಭಿಪ್ರಾಯ ಹಿಂದೂ ಸಂಘಟನೆಗಳ ಕಾರ್ಯಕರ್ತರದ್ದು. ಈ ಪ್ರಕರಣದಲ್ಲಿ ದೌರ್ಜನ್ಯ ನಡೆಸಿದ ‘ಪೊಲೀಸರ ತಲೆದಂಡವಾಗಿದ್ದು, ಹಲ್ಲೆಗೆ ಕಾರಣರಾದ ನಾಯಕರ ತಲೆದಂಡ ಯಾವಾಗ?’ ಎಂದು ಹಿಂದೂ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ.
ಈ ನಡುವೆ ಒಟ್ಟಾರೆ ಘಟನೆಗಳನ್ನು ಖಂಡಿಸಿ ಪುತ್ತೂರಿನಲ್ಲಿ ಶುಕ್ರವಾರ ಹಿಂದೂ ಸಂಘಟನೆಗಳು ಪ್ರತಿಭಟನೆಗೆ ತಯಾರಿ ನಡೆಸಿವೆ ಎನ್ನಲಾಗಿದೆ. ಹಿಂದೂ ಸಂಘಟನೆಗಳ ಈ ಹೋರಾಟವನ್ನು ಬೆಂಬಲಿಸಲು ಬಿಜೆಪಿಯ ಫೈರ್ ಬ್ರಾಂಡ್ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪುತ್ತೂರಿಗೆ ಭೇಟಿ ನೀಡಲಿದ್ದಾರೆ ಎಂದು ಹಿಂದೂ ಕಾರ್ಯಕರ್ತರು ಸಾರಿದ್ದಾರೆ. ಈ ಮೂಲಕ ಹಿಂದೂ ಸಂಘಟನೆಗಳ ಭದ್ರಕೋಟೆಯಲ್ಲೀಗ ‘ಹಿಂದೂತ್ವ Vs ಬಿಜೆಪಿ’ ಸಂಘರ್ಷ ತೀವ್ರಗೊಂಡಿದ್ದು, ಈ ಬಿಜೆಪಿ ವಿರುದ್ದದ ಹೋರಾಟದ ಅಖಾಡಕ್ಕೆ ಕಮಲ ನಾಯಕರೇ ಧುಮುಕಿರುವುದು ಅಚ್ಚರಿ ಹಾಗೂ ಕುತೂಹಲಕಾರಿ ಸಂಗತಿ.
























































ಈ ನಡುವೆ ಒಟ್ಟಾರೆ ಘಟನೆಗಳನ್ನು ಖಂಡಿಸಿ ಪುತ್ತೂರಿನಲ್ಲಿ ಶುಕ್ರವಾರ ಹಿಂದೂ ಸಂಘಟನೆಗಳು ಪ್ರತಿಭಟನೆಗೆ ತಯಾರಿ ನಡೆಸಿವೆ ಎನ್ನಲಾಗಿದೆ. ಹಿಂದೂ ಸಂಘಟನೆಗಳ ಈ ಹೋರಾಟವನ್ನು ಬೆಂಬಲಿಸಲು ಬಿಜೆಪಿಯ ಫೈರ್ ಬ್ರಾಂಡ್ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪುತ್ತೂರಿಗೆ ಭೇಟಿ ನೀಡಲಿದ್ದಾರೆ ಎಂದು ಹಿಂದೂ ಕಾರ್ಯಕರ್ತರು ಸಾರಿದ್ದಾರೆ. ಈ ಮೂಲಕ ಹಿಂದೂ ಸಂಘಟನೆಗಳ ಭದ್ರಕೋಟೆಯಲ್ಲೀಗ ‘ಹಿಂದೂತ್ವ Vs ಬಿಜೆಪಿ’ ಸಂಘರ್ಷ ತೀವ್ರಗೊಂಡಿದ್ದು, ಈ ಬಿಜೆಪಿ ವಿರುದ್ದದ ಹೋರಾಟದ ಅಖಾಡಕ್ಕೆ ಕಮಲ ನಾಯಕರೇ ಧುಮುಕಿರುವುದು ಅಚ್ಚರಿ ಹಾಗೂ ಕುತೂಹಲಕಾರಿ ಸಂಗತಿ.