ಹಾಸನ: ಚನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ನಮ್ಮ ಸರ್ಕಾರದಿಂದ ಜಾರಿಗೊಳಿಸಲಾಗುತ್ತಿದೆ. ಈ ವಿಚಾರದಲ್ಲಿ ಟೀಕೆಗಳಿಗೆ ಕಿವಿಗೊಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಜನತೆಯಲ್ಲಿ ಮನವಿಮಾಡಿದ್ದಾರೆ.
ಹಾಸನದಲ್ಲಿನ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವಾಗಿ ಮಾಡಲಾಗಿದೆ, ಜುಲೈ 1 ರಿಂದ ಗೃಹ ಜ್ಯೋತಿ ಜಾರಿಗೆ ತರಲಾಗುತ್ತಿದೆ ಎಂದರು.
1.28 ಕೋಟಿ ಕುಟುಂಬಗಳ ಯಜಮಾನಿಯರಿಗೆ ತಿಂಗಳಿಗೆ ತಲಾ 2000 ರೂ ನೀಡುವ ಗೃಹಲಕ್ಷ್ಮಿ ಯೋಜನೆ ಲಾಭ ಕೂಡ ತಲುಪಲಿದೆ ಎಂದವರು ತಿಳಿಸಿದರು.
ಕೇಂದ್ರ ಸರ್ಕಾರ ಮೊದಲು ಅಕ್ಕಿ ಕೊಡುವುದಾಗಿ ಒಪ್ಪಿ ಈಗ ನಿರಾಕರಣೆ ಮಾಡುತ್ತಿದ್ದಾರೆ. ಏನೇ ಆಗಲಿ 10 ಕೆ.ಜಿ ಅಕ್ಕಿ ಕೊಟ್ಟೆ ಕೊಡುತ್ತೇವೆ. ಯುವಕರಿಗೆ 24 ತಿಂಗಳು ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

























































