ನವದೆಹಲಿ: ದೇಶದ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಭಾನುವಾರ ವರ್ಚ್ ವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಅಮೃತ ಭಾರತ ಸ್ಟೇಷನ್ ಯೋಜನೆಯಡಿಯಲ್ಲಿ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 508 ರೈಲು ನಿಲ್ದಾಣಗಳು ಮೇಲ್ದರ್ಜೆಗೇರಲಿವೆ. ಈ ಯೋಜನೆಗಳಿಗೆ ಪ್ರಧಾನಿ ಮೋದಿ ಅವರು ಮುನ್ನುಡಿ ಬರೆದರು.
ಸುಮಾರು 25,000 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುವ ಯೋಜನೆ ಇದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಈ ಯೋಜನಾ ಕಾಮಗಾರಿಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿಯವರು, ಅಭಿವೃದ್ಧಿಯ ಗುರಿಯ ಕಡೆಗೆ ಚಲಿಸುತ್ತಿರುವ ಭಾರತ ಈಗ ಸುವರ್ಣ ಯುಗದ ಆರಂಭದಲ್ಲಿದೆ ಎಂದರು. ಭಾರತೀಯರಲ್ಲಿ ಹೊಸ ಶಕ್ತಿ, ಹೊಸ ಉತ್ಸಾಹ, ಸ್ಫೂರ್ತಿ ಮತ್ತು ಹೊಸ ನಿರ್ಣಯ ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ, ಭಾರತೀಯ ರೈಲ್ವೆ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದೆ ಎಂದರು.
ದೇಶಾದ್ಯಂತ ಮೊದಲ ಹಂತದಲ್ಲಿ ಕೈಗೊಳ್ಳಲಾಗುವ 508 ನಿಲ್ದಾಣಗಳ ಮೇಲ್ದರ್ಜೆಗೇರಿಸುವ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 55, ಬಿಹಾರದಲ್ಲಿ 49, ಮಹಾರಾಷ್ಟ್ರದಲ್ಲಿ 44, ಪಶ್ಚಿಮ ಬಂಗಾಳದಲ್ಲಿ 37, ಮಧ್ಯಪ್ರದೇಶದಲ್ಲಿ 34, ಅಸ್ಸಾಂನಲ್ಲಿ 32, ಒಡಿಶಾದಲ್ಲಿ 25, 22 ಸೇರಿದಂತೆ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿವೆ. ಪಂಜಾಬ್ನಲ್ಲಿ, ಗುಜರಾತ್ ಮತ್ತು ತೆಲಂಗಾಣದಲ್ಲಿ 21-21, ಜಾರ್ಖಂಡ್ನಲ್ಲಿ 20, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ 18-18, ಹರಿಯಾಣದಲ್ಲಿ 15, ಕರ್ನಾಟಕದಲ್ಲಿ 13 ನಿಲ್ದಾಣಗಳು ಇರಲಿವೆ.

























































