ಬೆಳಗಾವಿ: ರಾಜ್ಯದಲ್ಲಿ ಪರಿಸ್ಥಿತಿ ತಾಂಡವವಾಡುತ್ತಿದ್ದು ಸಿದ್ದರಾಮಯ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂಧಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಸದನದ ಗಮನ ಸೆಳೆದ ವಿಜಯೇಂದ್ರ, ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ದಿನಕ್ಕೆ ಸರಿಯಾಗಿ 7 ತಾಸು 3 ಫೇಸ್ ವಿದ್ಯುತ್ ನೀಡುವ ಕೆಲಸವನ್ನು ಮಾಡಿಲ್ಲ ಎಂದು ದೂರಿದರು.
ಬರದ ಕಷ್ಟಕರ ಸಂದರ್ಭದಲ್ಲಿ ರೈತರಿಗೆ ಸ್ಪಂದಿಸಬೇಕಿದ್ದ ರಾಜ್ಯ ಸರ್ಕಾರ, ಪಶು ಆಹಾರದ ದರವನ್ನೂ ಸಹ ಹೆಚ್ಚಿಸಿ, ಗಾಯದ ಮೇಲೆ ಬರೆ ಎಳೆಯುವಂತಹ ಕೆಲಸವನ್ನು ಮಾಡಿದೆ ಎಂದು ಅವರು ಆರೋಪಿಸಿದರು.
ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ದಿನಕ್ಕೆ ಸರಿಯಾಗಿ 7 ತಾಸು 3 ಫೇಸ್ ವಿದ್ಯುತ್ ನೀಡುವ ಕೆಲಸವನ್ನು ಮಾಡಿಲ್ಲ. ಬರದ ಕಷ್ಟಕರ ಸಂದರ್ಭದಲ್ಲಿ ರೈತರಿಗೆ ಸ್ಪಂದಿಸಬೇಕಿದ್ದ ರಾಜ್ಯ ಸರ್ಕಾರ, ಪಶು ಆಹಾರದ ದರವನ್ನೂ ಸಹ ಹೆಚ್ಚಿಸಿ, ಗಾಯದ ಮೇಲೆ ಬರೆ ಎಳೆಯುವಂತಹ ಕೆಲಸವನ್ನು ಮಾಡಿದೆ.
– ಶ್ರೀ @BYVijayendra, ರಾಜ್ಯಾಧ್ಯಕ್ಷರು… pic.twitter.com/nV6JEm8uEB
— BJP Karnataka (@BJP4Karnataka) December 13, 2023