ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎರಡನೇ ಟರ್ಮಿನಲ್ ನಿಂದ KSRTC-BMTC ನಿಗಮದ ಫ್ಲೈಬಸ್, ವಾಯುವಜ್ರ ಬಸ್ ಸೇವೆಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೆ.ಹೆಚ್. ಮುನಿಯಪ್ಪ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು, ಕರ್ನಾಟಕ ಸರ್ಕಾರ ಮತ್ತು ಜಿ. ಸತ್ಯವತಿ, ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳಾದ ಸತ್ಯಕಿ ರಘುನಾಥ್, ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ, ಶಾಲಿನಿ ರಾವ್, ಮುಖ್ಯ ಮಾರುಕಟ್ಟೆ ಅಧಿಕಾರಿ, ಡೊಮಿನಿಕ್ ದೇವಸಿಯಾ, ವಿಶಾಲ್ ಕೆ, ಸಂಜಯ್ ಚಂದ್ರ, ಶಿವ ಶಂಕರ್, ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರಸ್ತುತ ವಿಮಾನ ನಿಲ್ದಾಣದಿಂದ ಕ.ರಾ.ರ.ಸಾ.ನಿಗಮದ ಒಟ್ಟು 13 ಫ್ಲೈಬಸ್ ಸೇವೆಗಳನ್ನು 42 ಟ್ರಿಪ್ಗಳ ಮುಖಾಂತರ ಪ್ರತಿನಿತ್ಯ ಮೈಸೂರು, ಕುಂದಾಪುರ ಹಾಗೂ ಮಡಿಕೇರಿ ಮಾರ್ಗಗಳಲ್ಲಿ ಆಚರಿಸಲಾಗುತ್ತದೆ.
KSRTC ವತಿಯಿಂದ ಫ್ಲೈಬಸ್ ಸೇವೆಗೆ ದಶಕ ಸಂಭ್ರಮ. ಇದೀಗ ಈ ಸೇವೆ ಮತ್ತಷ್ಟು ಸೊಗಸಾಗಿದ್ದು, ಪ್ರಯಾಣಿಕರಿಗೆ ಆರಾಮದ ಪ್ರಯಾಣ ಸೌಲಭ್ಯಕ್ಕೆ ಇದು ಸಾಕ್ಷಿಯಾಗಲಿದೆ. ಇದೇ ವೇಳೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಪ್ರತಿ ದಿನ 137 ಹವಾ ನಿಯಂತ್ರಿತ ವಾಹನಗಳ ಮೂಲಕ 944 ಟ್ರಿಪ್ಪುಗಳಲ್ಲಿ ಕಾರ್ಯಾಚರಣೆ ನಡೆಸಿ 47907 ಕಿ.ಮಿಗಳನ್ನು ಕ್ರಮಿಸಿ ಕಾರ್ಯಾಚರಣೆ ಮಾಡಿ 14000 ಪ್ರಯಾಣಿಕರಿಗೆ ಸೇವೆಯನ್ನು ಕಲ್ಪಿಸಲಾಗಿದೆ.
ವಿಮಾನ ನಿಲ್ದಾಣದ ಲಾಂಜ್ ನಲ್ಲಿ ಸುಸಜ್ಜಿತ ನೀರಿನ, ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದ್ದು ವಾಹನಗಳ ಕಾರ್ಯಾಚರಣೆಯ ಸಮಯ, ಡಿಜಿಟಲ್ ಫಲಕಗಳು, ಸಾರ್ವಜನಿಕ ಉದ್ಘೋಶಣ ವ್ಯವಸ್ಥೆ ಕಲ್ಪಿಸಲಾಗಿದ್ದು 40 ಸಿಬ್ಬಂದಿ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರಿಗೆ ಮಾಹಿತಿಯನ್ನು ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆಗಳಲ್ಲಿ ಒದಗಿಸಲಾಗಿತ್ತಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
































































