ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿರುವ ಕರ್ನಾಟಕದ ಗೃಹ ಸಚಿವ ಜಿ.ಪರಮೇಶ್ವರ, ಪೂಜಾರಿ ಪ್ರಸ್ತುತ 16 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂಬ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ಬಿಜೆಪಿ ಆರೋಪಗಳ ಕುರಿತಂತೆ ಪ್ರತಿಕ್ರಿಯಿಸಿರುವ ಪರಮೇಶ್ವರ್, ಪೂಜಾರಿ ವಿರುದ್ಧ 16 ಪ್ರಕರಣಗಳು ದಾಖಲಾಗಿವೆ, ಆದರೆ ಈಗ 16 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ನಾನು ಎಂದಿಗೂ ಹೇಳಿಲ್ಲ,’’ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಕರಸೇವಕರ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ ಪರಮೇಶ್ವರ, ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗಾಗಿ ಪಕ್ಷ ನಡೆಸುತ್ತಿರುವ ವ್ಯಾಪಕ ಪ್ರತಿಭಟನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಶ್ರೀಕಾಂತ್ ಪೂಜಾರಿ ಸೇರಿದಂತೆ 26 ಪ್ರಕರಣಗಳನ್ನು ನ್ಯಾಯಾಲಯ ಪರಿಶೀಲಿಸಿದ್ದು, ಇಂತಹ ಪ್ರತಿಭಟನೆಯ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.