ಬೆಂಗಳೂರು: ಕೇಂದ್ರ ಬಜೆಟ್ ರೈತರ ಪಾಲಿಗೆ ನಿರಾಸದಾಯಕ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಬಜೆಟ್ ಕುರಿತಂತೆ ಪ್ರತಿಕ್ರಿಯಿಸಿರುವ ಕುರುಬರು ಶಾಂತಕುಮಾರ್, ಪ್ರಧಾನಿ ಮೋದಿ ಅವರು ದೆಹಲಿ ರೈತರ ಹೋರಾಟಕ್ಕೆ ಭರವಸೆ ನೀಡಿದಂತೆ ಎಂ ಎಸ್ ಸ್ವಾಮಿನಾಥನ್ ವರದಿ ಪ್ರಕಾರ ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ ಬಗ್ಗೆ,ರೈತರ ಸಾಲ ಮನ್ನದ ಬಗ್ಗೆ ಯಾವುದೇ ನಿರ್ಧಾರ ಇಲ್ಲ ಫಸಲ್ ಭೀಮ ಬೆಳೆ ವಿಮೆ ನೀತಿ ಬದಲಾವಣೆ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಕೃಷಿ ಕ್ಷೇತ್ರದ ಬಗ್ಗೆ ಯಾವುದೇ ಗಂಭೀರ ಪರಿಹಾರ ಇಲ್ಲ ನಿರಾಶದಾಯಕ ಬಜೆಟ್ ರೈತ ವಿರೋಧಿ ಬಜೆಟ್ ಆಗಿದೆ ಎಂದಿದ್ದಾರೆ.
ಗೃಹಶಕ್ತಿ ಮನೆಗಳಿಗೆ ಸೌರ ವಿದ್ಯುತ್ ಕಲ್ಪಿಸುವ ಭರವಸೆ ಬಡವರಿಗೆ ಆಶಾದಾಯಕ ಎಂದು ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.




















































