ಭೂಪಾಲ್: ದೇಶದ ಅನ್ನದಾತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜಧಾನಿ ದೆಹಲಿಯಲ್ಲಿ ಆಯೋಜಿತವಾಗಿರುವ ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟವು ಸರ್ಕಾರಕ್ಕೆ ಸವಾಲೆಂಬಂತಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳ ರೈತರು ದೆಹಲಿಗೆ ದೌಡಾಯಿಸುತ್ತಿದ್ದು ರಾಜಧಾನಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನಗಳಿಗೆ ತಡೆಯೊಡ್ಡುವ ಪ್ರಯತ್ನ ಪೊಲೀಸರಿಂದ ನಡೆದಿದೆ.
ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಂದಲೂ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ರೈತರು ದೆಹಲಿಯಲ್ಲಿನ ಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದು ಹಲವೆಡೆ ಈ ರೈತರನ್ನು ತಡೆಯುವ ಪ್ರಯತ್ನವೂ ನಡೆದಿದೆ. ಇದೆ ವೇಳೆ ಭೋಪಾಲ್’ನಲ್ಲಿ ಕರ್ನಾಟಕದ ರೈತರನ್ನು ಪೊಲೀಸರು ತಡೆದ ಪ್ರಸಂಗವೂ ನಡೆದಿದೆ.
ಕರ್ನಾಟಕದಿಂದ ದೆಹಲಿಯ ಕಡೆ ಹೊರಟಿದ್ದ ನೂರಾರು ರೈತರನ್ನು ಭೂಪಾಲ್ ರೈಲು ನಿಲ್ದಾಣದಲ್ಲಿ ಬಲವಂತವಾಗಿ ಬಂಧಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟಕ್ಕೆ ಹೋಗುತ್ತಿದ್ದ ರಾಜ್ಯ ಕಬ್ಬು ಬೆಳೆಗಾರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಮುಖಂಡರನ್ನೊಳಗೊಂಡ ರೈತರನ್ನು ಬಲವಂತವಾಗಿ ಪೊಲೀಸರು ಭೂಪಾಲ್ ರೈಲು ನಿಲ್ದಾಣದಲ್ಲಿ ತಡೆದಿದ್ದಾರೆ. ರೈತರನ್ನು ರೈಲಿನಿಂದ ಇಳಿಸಿರುವ ಪೊಲೀಸರು ವಶಕ್ಕೆ ತಡೆದಿದ್ದಾರೆ. ಪೊಲೀಸರು ಎಳೆದಾಡಿದ ವೇಳೆ ಕುರುಬೂರು ಶಾಂತಕುಮಾರ್ ಪತ್ನಿ ಪದ್ಮರವರಿಗೆ ತಲೆಗೆ ಏಟು ತಗುಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್, ಗಾಯಗೊಂಡಿರುವ ತಮ್ಮ ಪತ್ನಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
This is the height of dictatorship.
Farmers coming from Karnataka to Delhi to participate in MSP protest were caught and arrested in Bhopal.
The local police not only beat them up but also snatched away their mobiles. The wife of farmer leader Shantakumar was seriously injured… pic.twitter.com/sBWzO0RC3M
— Tractor2ਟਵਿੱਟਰ ਪੰਜਾਬ (@Tractor2twitr_P) February 12, 2024