ಚೆನ್ನೈ: ತಮಿಳುನಾಡಿನ ಸತ್ತೂರು ಸಮೀಪದ ಕುಂಡಯಿರುಪ್ಪುವಿನ ಖಾಸಗಿ ಪಟಾಕಿ ಕಾರ್ಖಾನೆ ಘಟಕದಲ್ಲಿ ಸಂಭವಿಸಿದ ಸ್ಫೋಟ ಘಟನೆಯಲ್ಲಿ 10 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಮೂರು ಮಂದಿ ಗಾಯಗೊಂಡಿದ್ದಾರೆ.
ವಿನ್ನರ್ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದ ಪರಿಣಾಮವಾಗಿ ಆವರಣದೊಳಗಿನ ಐದು ಕಟ್ಟಡಗಳು ಸಂಪೂರ್ಣ ನಾಶವಾಗಿವೆ. ಪ್ರಾಥಮಿಕ ವರದಿಗಳ ಪ್ರಕಾರ ಒಂಬತ್ತು ವ್ಯಕ್ತಿಗಳನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೃತರ ಕುಟುಂಬಗಳಿಗೆ 3 ಲಕ್ಷ ರೂ ಮತ್ತು ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.