ಬೆಂಗಳೂರು: ಕರ್ಬಾಟಕದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿಯು karresults.nic.in ಮತ್ತು pue.kar.nic ವೆಬ್ಸೈಟ್ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದೆ.
ಈ ಬಾರಿಯ ಪಿಯುಸಿ ಫಲಿತಾಂಶದ ಹೈಲೈಟ್ಸ್ ಹೀಗಿದೆ:
-
ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು.
-
ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆ.
-
ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.
-
97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ.
-
ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನ.
-
ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನ.
-
ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.
-
ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆ.
-
ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಉತ್ತೀರ್ಣ,
-
ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣ.
-
ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ.
-
ಕೆ ಹೆಚ್ ಉರ್ವೀಶ್ ಪ್ರಶಾಂತ್ 597 ಅಂಕ,
-
ವೈಭವಿ ಆಚಾರ್ಯ 597 ಅಂಕ ಪಡೆದಿದು ದ್ವಿತೀಯ ಸ್ಥಾನ.
-
ಕಲಾ ವಿಭಾಗದಲ್ಲಿ ಮೇಧಾ ಡಿ 600ಕ್ಕೆ 596 ಅಂಕಗಳನ್ನು ಪಡೆದು ಪ್ರಥಮ ಸ್ಥಾನ,
-
ವಿಜಯಪುರದ ವೇದಾಂತ್ ಜ್ಞಾನುಭ ನವಿ ಮತ್ತು ಕವಿತಾ ಬಿ ವಿ 600ಕ್ಕೆ 596 ಅಂಕ ಪಡೆದು ಅನಂತರದ ಟಾಪರ್.
-
ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜಾಹ್ನವಿ 600ಕ್ಕೆ 597 ಅಂಕ ಪಡೆದು ಮೊದಲ ಸ್ಥಾನ.
-
ಪವನ್ ಎಂ ಎಸ್ ಮತ್ತು ಹರ್ಷಿತ ಎಸ್ ಎಚ್ 596 ಅಂಕ ಪಡೆದು ದ್ವಿತೀಯ ಸ್ಥಾನ