ಬೆಂಗಳೂರು: ರಾಜ್ಯದ ವಿದ್ಯುತ್ ನಿಗಮಗಳು ಸಾಲಕ್ಕಾಗಿ ಸರ್ಕಾರದ ಅನುಮತಿ ಕೋರಿ ಬರೆದಿದೆ ಎನ್ನಲಾಗಿರುವ ಬೆಳವಣಿಗೆ ರಾಜಕೀಯ ಪಕ್ಷಗಳ ಜಟಾಪಟಿಗೆ ಕಾರಣವಾಗಿದೆ.
ವಿದ್ಯುತ್ ಸರಬರಾಜು ಕಂಪನಿಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ವಿದ್ಯುತ್ ಖರೀದಿ ಶುಲ್ಕ ಪಾವತಿಸಲು ಹಾಗೂ ಕಂಪನಿಯ ಇತರೆ ವೆಚ್ಚಗಳನ್ನು ಭರಿಸಲು ಕಷ್ಟಕರವಾಗುತ್ತಿದ್ದು, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡುವಂತೆ ಕೋರಿ ಸರ್ಜಾರಕ್ಕೆ ಪತ್ರ ಬರೆದಿರುವ ಇಂಧನ ಇಲಾಖೆ, ಸಾಲಕ್ಕಾಗಿ ಅನುಮತಿ ನೀಡಲು ಸಾಧ್ಯವಿಲ್ಲವೆಂದಾದರೆ ಸರ್ಕಾರದಿಂದ ಬರಬೇಕಿರುವ ಬಾಕಿಯನ್ನು ಪಾವತಿಸುವಂತೆ ಮನವಿ ಮಾಡಲಾಗಿದೆ.
ಈ ಪತ್ರ ಬೆಳವಣಿಗೆಯನ್ನು ಮುಂದಿಟ್ಟು ಪ್ರತಿಪಕ್ಷ ಬಿಜೆಪಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕಟುವಾಗಿ ಟೀಕಿಸಿದೆ. ಈ ಪತ್ರವನ್ನು ಮುಂದಿಟ್ಟು ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ಸಂಪೂರ್ಣ ಬರ್ಬಾದ್ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್ ಎಂದು ಟೀಕಿಸಿದೆ.
ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ ಸಂಪೂರ್ಣ ಶ್ರೇಯ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ರಾಜ್ಯದ ಇಂಧನ ಇಲಾಖೆ ತನ್ನ ದೈನಂದಿನ ಚಟುವಟಿಕೆಗಳಿಗೂ ಸಹ ಹಣವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿ, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿಯನ್ನು ಪಾವತಿಸಿ ಎಂದು ಪತ್ರ ಬರೆದಿರುವುದು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುದರ ಸುಸ್ಪಷ್ಟ ನಿದರ್ಶನ ಎಂದು ಬಿಜೆಪಿ ಬಣ್ಣಿಸಿದೆ.
ಸಿಎಂ ಸಿದ್ದರಾಮಯ್ಯ ಅವರೇ ಕರ್ನಾಟಕ ಬರ್ಬಾದ್ ಆಗಿದೆ ಎಂಬುದು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ ಎಂದಿರುವ ಬಿಜೆಪಿ, ಸಿದ್ದರಾಮಯ್ಯನವರು, ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ? ಎಂದು ಪ್ರಶ್ನಿಸಿದೆ.
ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ಸಂಪೂರ್ಣ ಬರ್ಬಾದ್ ಮಾಡುವುದೇ @INCKarnataka ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್!!
ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ ಸಂಪೂರ್ಣ ಶ್ರೇಯ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ.
ರಾಜ್ಯದ ಇಂಧನ ಇಲಾಖೆ ತನ್ನ ದೈನಂದಿನ ಚಟುವಟಿಕೆಗಳಿಗೂ ಸಹ ಹಣವಿಲ್ಲ ಎಂದು ಅಸಹಾಯಕತೆ… pic.twitter.com/jZEHQg3t73
— BJP Karnataka (@BJP4Karnataka) July 2, 2024