ಬೆಂಗಳೂರು: ತೈಲ ದರ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ನಿಗಮಗಳ ಬಸ್ಸುಗಳಲ್ಲಿನ ಟಿಕೆಟ್ ದರ ಹೆಚ್ಚಳ ಸಾಧ್ಯತೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಸದ್ಯಕ್ಕೆ ಬಸ್ ಪ್ರಯಾ ದರ ಏರಿಕೆಯಿಲ್ಲ ಎಂದವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ಆರಂಭಕ್ಕೆ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಮಲಿಂಗ ರೆಡ್ಡಿ ಕೆಎಸ್ಸಾರ್ಟಿಸಿ ಪ್ರಯಾಣ ದರ ಏರಿಕೆ ಸಾಧ್ಯತೆಗಳ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದರು. ರಾಜು ಕಾಗೆ ಅವರು ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ ಎಂದ ಸಚಿವರು, ಸದ್ಯ ಟಿಕೆಟ್ ದರ ಏರಿಕೆಯ ಪ್ರಸ್ತಾವನೆ ಸರ್ಜಾರದ ಮುಂದಿಲ್ಲ ಎಂದರು.