ಬೆಂಗಳೂರು: ಮೀಸಲಾತಿಗೆ ಒತ್ತಾಯಿಸಿ ಸುದೀರ್ಘ ಹೋರಾಟ ನಡೆಸುತ್ತಿರುವ ಲಿಂಗಾಯತ ಪಂಚಮಸಾಲಿ ಸಮುದಾಯ ಇದೀಗ ರಾಜಭವನದ ಕದ ತಟ್ಟಿದೆ. ಸರ್ಕಾರದ ನಿರ್ಲಕ್ಷ್ಯಕ್ಕೆ ಅಸಮಾಧಾನಗೊಂಡಿರುವ ಲಿಂಗಾಯತ ಪಂಚಮಸಾಲಿ ಸಮುದಾಯದ ಪ್ರಮುಖರು ಜಗದ್ಗುರುಗಳ ನೇತೃತ್ವದಲ್ಲಿ ವಕೀಲರ ಜೊತೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸಭೆ ನಡೆಸಿದ ಸಮುದಾಯದ ಮುಖಂಡರು ಪಂಚಮಸಾಲಿ ಮೀಸಲಾತಿ ನಿರ್ಲಕ್ಷ್ಯ ಮಾಡಿದರೆ ಬೆಳಗಾವಿ ವಿಧಾನಸೌಧ ಅಧಿವೇಶನ ಸಂದರ್ಭದಲ್ಲಿ ಉಗ್ರ ಹೋರಾಟ ನಡೆಸಲು ತೀರ್ಮಾನಿಸಿದೆ. ಸೆಪ್ಟೆಂಬರ್ 11 ರಂದು ಬೆಳಗಾವಿಯಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ವಕೀಲರ 2A ಹಕ್ಕೊತ್ತಾಯ ಸಮಾವೇಶ ಹಾಗೂ ಸರ್ ಸಿದ್ದಪ್ಪ ಕಂಬಳಿ ಜಯಂತಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಕೂಡಲಸಂಗಮ ಪಂಷಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ಜುಲೈ 23 ರಂದು ಬೆಂಗಳೂರಿನಲ್ಲಿ ಕೂಡಲಸಂಗಮ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸಾನಿಧ್ಯದಲ್ಲಿ ಪ್ರಥಮ ಬಾರಿಗೆ ಲಿಂಗಾಯತ ಪಂಚಮಸಾಲಿ ವಕೀಲರ ರಾಜ್ಯ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಪಂಚಮಸಾಲಿ ವಕೀಲರ ರಾಜ್ಯ ಸಭೆಯ ನಿರ್ಣಯಗಳು*
-
ಸರ್ಕಾರ ಕೂಡಲೇ ಕಾನೂನು ಸಭೆ ಕರೆದು ತಿಂಗಳೊಳಗೆ ಪಂಚಮಸಾಲಿ 2 A ಹಾಗೂ ಲಿಂಗಾಯತ ObC ಬಗ್ಗೆ ಸ್ಪಷ್ಟನೆ ನೀಡಬೇಕು
-
ಕಾನೂನು ಅಡತಡೆ ನಿವಾರಿಸಿ ಮೀಸಲಾತಿ ಘೋಷಣೆ ಮಾಡಬೇಕು
-
ರಾಜ್ಯ ಜಿಲ್ಲಾ ತಾಲೂಕು ಮಟ್ಟದಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ ( L P A P) ಹೆಸರಿನಲ್ಲಿ ನೂತನ ಸಂಘಟನೆಯನ್ನು ಸ್ಥಾಪಿಸಲು ನಿರ್ಣಯ ಕೈಗೊಳ್ಳಲಾಯಿತು.
-
11 ಜನರ ಕಾನೂನು ತಜ್ಞರ ಉನ್ನತ ಸಮಿತಿಯನ್ನು ರಚಿಸಿ ಅವರ ಮಾರ್ಗದರ್ಶನ ಪಡೆಯಲು ತೀರ್ಮಾನಿಸಲಾಯಿತು.