ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೇಗದೂತ ಮಾದರಿ ಬಸ್ಗಳ ಲೋಕಾರ್ಪಣೆ ಕಾರ್ಯಕ್ರಮ ಗಮನಸೆಳೆಯಿತು. ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನೂತನ ಬಸ್ಸುಗಳಿಗೆ ಹಸಿರು ನಿಶಾನೆ ತೋರಿದರು.
ಪ್ರಯಾಣಿಕರ ಸುರಕ್ಷತೆಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ, ಈ ಬಸ್ಸುಗಳಲ್ಲಿ, Fire Detection and Alarm System, Electronic Vehicle Stability Control System, ಸ್ವಯಂ ಚಾಲಿತ ಬಾಗಿಲು , ನಾಲ್ಕು ಸಿ.ಸಿ. ಕ್ಯಾಮೆರಾಗಳು, ರೀವರ್ಸ್ ಪಾರ್ಕಿಂಗ್ ಅಲರಾಮ್ ಸಿಸ್ಟಂ, ವೆಹಿಕಲ್ ಲೋಕೆಶನ್ ಟ್ರ್ಯಾಕಿಂಗ್ ಸಿಸ್ಟಂ ಹಾಗೂ ಪ್ಯಾಸೆಂಜರ್ ಇನಫಾರಮೆಶನ್ ಸಿಸ್ಟಂ & ಪ್ಯಾನಿಕ್ ಬಟನ್ಗಳನ್ನು ಅಳವಡಿಸಿದೆ ಎಂದು ನಿಗಮದ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.