ಬೆಂಗಳೂರು: ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರ ಕೊನೆಗೂ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗೆ ವಹಿಸಿದೆ. ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಸಂಬಂಧ ಆದೇಶ ಹೊರಡಿಸಿದೆ.
ಮಂಗಳೂರಿನಲ್ಲಿ 42 ವರ್ಷದ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಬೇಕು ಎಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಪಟ್ಟುಹಿಡಿದಿದ್ದವು. ದಕ್ಷಿಣ ಕನ್ನಡದ ಬಿಜೆಪಿ ಸಂಸದ ಬ್ರಿಜೇಶ್ ಚೌಟ ಅವರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಪ್ರಕರಣದ ತನಿಖೆಯನ್ನು NIAಗೆ ವಹಿಸಬೇಕೆಂದು ಒತ್ತಾಯಿಸಿದ್ದರು. ಈದೀಗ ಈ ಪ್ರಕರಣದ ತನಿಖೆಯನ್ನು NIA) ಗೆ ವಹಿಸಿ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿಜಯೇಂದ್ರ ಸ್ವಾಗತ:
ಕೇಂದ್ರ ಸರ್ಕಾರದ ಈ ನಡೆಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವಾಗತಿಸಿದ್ದಾರೆ. ಕರಾವಳಿ ಜನತೆಯ ಮನವಿಗೆ ಸ್ಪಂದಿಸಿ ನಮ್ಮ ಕೇಂದ್ರ ಸರ್ಕಾರ ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿರುವ ನಿರ್ಧಾರ ಸ್ವಾಗತಾರ್ಹ ಕ್ರಮವಾಗಿದೆ, ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವೆ ಎಂದವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಕರಾವಳಿ ಜನತೆಯ ಮನವಿಗೆ ಸ್ಪಂದಿಸಿ ನಮ್ಮ ಕೇಂದ್ರ ಸರ್ಕಾರ ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿರುವ ನಿರ್ಧಾರ ಸ್ವಾಗತಾರ್ಹ ಕ್ರಮವಾಗಿದೆ, ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವೆ.
ಕರಾವಳಿಯಲ್ಲಿ ಹಿಂದೂ ಸಮುದಾಯ ಆತಂಕ ಪಡುವ ಪರಿಸ್ಥಿತಿ ನಿರ್ಮಾಣ ಮಾಡುವ… pic.twitter.com/Luwa4csbsP
— Vijayendra Yediyurappa (@BYVijayendra) June 8, 2025
ಕರಾವಳಿಯಲ್ಲಿ ಹಿಂದೂ ಸಮುದಾಯ ಆತಂಕ ಪಡುವ ಪರಿಸ್ಥಿತಿ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಭೀಕರವಾಗಿ ನಡು ರಸ್ತೆಯಲ್ಲಿ ಸುಹಾಸ್ ಕೊಲೆ ನಡೆದಿದೆ, ಈ ಪ್ರಕರಣದ ತನಿಖೆಯ ಹಾದಿ ಕಾಂಗ್ರೆಸ್ ಸರ್ಕಾರದ ಆಡಳಿತದ ನೆರಳಿನಲ್ಲಿ ದಿಕ್ಕು ತಪ್ಪುತ್ತಿದ್ದ ಪರಿ ಹಾಗೂ ನ್ಯಾಯದ ನಿರೀಕ್ಷೆಯಲ್ಲಿದ್ದ ಕುಟುಂಬಸ್ಥರ ನಿರೀಕ್ಷೆ ಕುಸಿಯುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಎನ್ಐಎ ಗೆ ವಹಿಸಿರುವ ಕ್ರಮ ಕೊಲೆಗಡುಕರಿಗೆ ಶಿಕ್ಷೆಯಾಗುವ ಹಾಗೂ ರಾಷ್ಟ್ರ ವಿರೋಧಿ ಶಕ್ತಿಗಳ ಷಡ್ಯಂತರ ಬಯಲು ಮಾಡುವ ಭರವಸೆ ಹುಟ್ಟಿಸಿದೆ ಎಂದವರು ಹೇಳಿದ್ದಾರೆ.
ಕೋಮು ನಿಗ್ರಹ ದಳದ ಮೂಲಕ ಹಿಂದೂ ಕಾರ್ಯಕರ್ತರನ್ನಷ್ಟೇ ಟಾರ್ಗೆಟ್ ಮಾಡಿ ಕರಾವಳಿ ಪ್ರದೇಶದಲ್ಲಿ ಹಿಂದೂ ಸಮಾಜದ ಯುವಕರ ಭವಿಷ್ಯವನ್ನು ಮುಸುಕಾಗಿಸುವ ಮುಸ್ಲಿಂ ಓಲೈಕೆಯ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ವ್ಯವಸ್ಥೆಯನ್ನು ಹಿಂದೂ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಲು ಬಳಸಿಕೊಳ್ಳುತ್ತಿದ್ದು ಈ ಸಂಬಂಧ ಬಿಜೆಪಿ ದೊಡ್ಡಮಟ್ಟದಲ್ಲಿ ಹೋರಾಟ ನಡೆಸುವ ಅನಿವಾರ್ಯ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ ಸಹೋದರ ಸುಹಾಸ್ ಶೆಟ್ಟಿ ಹತ್ಯೆಯ ಪ್ರಕರಣವನ್ನು ಎನ್ಐಎ ತನಿಖೆಗೆ ಆದೇಶಿಸಿರುವ ಕೇಂದ್ರ ಸರ್ಕಾರದ ನಿರ್ಣಯ ಅತ್ಯಂತ ಸ್ವಾಗತಾರ್ಹವಾಗಿದ್ದು, ಈ ನಿರ್ಧಾರ ಕೈಗೊಂಡ ಕೇಂದ್ರ ಗೃಹ ಸಚಿವರಿಗೆ ಧನ್ಯವಾದಗಳು ಎಂದಿದ್ದಾರೆ.